Advertisement

ಪರಪ್ಪನ ಅಗ್ರಹಾರಕ್ಕೆ ಸಿಸಿಬಿ ಪೊಲೀಸರ ದಾಳಿ

09:57 AM Oct 11, 2019 | Team Udayavani |

ಬೆಂಗಳೂರು: ಮಾಡಿರುವ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಜೈಲಿನಲ್ಲೂ ಅಕ್ರಮ ನಡೆಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

Advertisement

ನಗರ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ ಈ ದಾಳಿ ನಡೆದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ 60 ಮಂದಿ ತಂಡ ದಾಳಿ ನಡೆಸಿ ಕೈದಿಗಳ ವಿಚಾರಣೆ ನಡೆಸಿದೆ.

ಜೈಲಿನೊಳಗೆ ಗಾಂಜಾ ಬಳಕೆಯಾಗುತ್ತಿದೆ ಎಂಬ ಆರೋಪದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಜೈಲಿನೊಳಗೆ ಮಾರಕಾಯುಧಗಳು ಕೂಡಾ ಪತ್ತೆಯಾಗಿವೆ ಎಂದೂ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next