Advertisement

ಬೆಚ್ಚಿ ಬೀಳಿಸುವ ಘಟನೆ: ತಂದೆಗೆ ಥಳಿಸಿ ಮಗಳನ್ನು ಅಪಹರಿಸಿದ ನಾಲ್ವರ ತಂಡ

03:37 PM Dec 20, 2022 | Team Udayavani |

ತೆಲಂಗಾಣ: ಮಂಗಳವಾರ ಬೆಳಗ್ಗೆ ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ 18 ವರ್ಷದ ಯುವತಿಯನ್ನು ಕಾರಿನಲ್ಲಿ ಬಂದ ನಾಲ್ವರ ತಂಡವು ಅಪಹರಿಸಿದ ಘಟನೆ ನಡೆದಿದೆ.

Advertisement

ಜಿಲ್ಲೆಯ ಚಂದೂರ್ತಿ ಮಂಡಲದ ಮೂಡೆಪಲ್ಲಿ ಗ್ರಾಮದಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯ ಜೊತೆ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ವರ ತಂಡ ತಂದೆಗೆ ಹಲ್ಲೆ ನಡೆಸಿ ಯುವತಿಯನ್ನು ಅಪಹರಿಸಿದ್ದಾರೆ, ಯುವತಿಯ ಅಪಹರಣದ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದರಲ್ಲಿ ಯುವತಿ ಹಾಗೂ ಆಕೆಯ ತಂದೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಬಿಳಿ ಕಾರಿನಲ್ಲಿ ಬಂದ ನಾಲ್ವರ ತಂಡ ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಕರೆದೊಯ್ದಿದ್ದಾರೆ ಇದನ್ನು ತಪ್ಪಿಸಲು ಬಂದ ಯುವತಿಯ ತಂದೆಗೆ ತಂಡ ಹಲ್ಲೆ ನಡೆಸಿದ್ದು, ಕೂಡಲೇ ಯುವತಿಯ ತಂದೆ ಹತ್ತಿರದ ಪೊಲೀಸ್ ಠಾಣೆಗೆ ಮಗಳನ್ನು ಅಪಹರಿಸಿದ ಕುರಿತು ದೂರು ನೀಡಿದ್ದಾರೆ.

ಮಾಹಿತಿಯಂತೆ ಅಪಹರಣಕಾರರ ತಂಡದಲ್ಲಿದ್ದ ಓರ್ವ ವ್ಯಕ್ತಿ ಯುವತಿಯ ಊರಿನವಳೇ ಎಂದು ತಿಳಿದುಬಂದಿದೆ. ಅಲ್ಲದೆ ಆ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಬಳಿಕ ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿದ್ದು ಸೋಮವಾರವಷ್ಟೇ ಯುವತಿಗೆ ಬೇರೊಬ್ಬ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು ಎನ್ನಲಾಗಿದೆ, ಇದೆ ಕಾರಣಕ್ಕೆ ಯುವಕ ಯುವತಿಯನ್ನು ಅಪಹರಿಸಿರಬಹುದೆಂದು ಯುವತಿಯ ತಂದೆ ಶಂಕೆ ವ್ಯಕ್ತಪಡಿಸಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.

ಇದನ್ನೂ ಓದಿ: ಎರಡನೇ ಹಾಡು ರಿಲೀಸ್‌ ಗೆ ʼಪಠಾಣ್‌ʼ ರೆಡಿ: ಮತ್ತೆ ಬೋಲ್ಡ್‌ ಲುಕ್‌ ನಲ್ಲಿ ಕಾಣಿಸಿಕೊಂಡ ದೀಪಿಕಾ

Advertisement
Advertisement

Udayavani is now on Telegram. Click here to join our channel and stay updated with the latest news.

Next