Advertisement

ಜಾರಕಿಹೊಳಿ ಸಿಡಿ ಪ್ರಕರಣ: ನ್ಯಾಯಾಧೀಶರ ಮುಂದೆ ಹಾಜರಾದ ಯುವತಿ

03:23 PM Mar 30, 2021 | Team Udayavani |

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರಿದ್ದರೆನ್ನಲಾದ ವಿಡಿಯೋ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದ ಯುವತಿ ಇಂದು 24ನೇ ಎಪಿಎಂಸಿ  ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ ಎಂದು ಯುವತಿ ಪರ ವಕೀಲ ಜಗದೀಶ್ ತಿಳಿಸಿದರು.

Advertisement

ವಿಡಿಯೋ ಬಿಡುಗಡೆಯಾಗಿ 28 ದಿನಗಳ ಬಳಿಕ ಯುವತಿ ತನ್ನ ಹೇಳಿಕೆ ನೀಡಲಿದ್ದಾಳೆ. ವಿಶೇಷ ಭದ್ರತೆಯಲ್ಲಿ ಕೋರ್ಟ್ ಗೆ ಬಂದಿದ್ದು, ಅಲ್ಲಿ ನ್ಯಾಯಾಧೀಶರು ಮತ್ತು ಟೈಪಿಸ್ಟ್ ಎದುರುಗಡೆ ಯುವತಿ ತನ್ನ ಹೇಳಿಕೆಯನ್ನು ನೀಡಲಿದ್ದಾಳೆ.

ಇದನ್ನೂ ಓದಿ:ಸಿ.ಡಿ ಪ್ರಕರಣ: ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ

ಭಾನುವಾರ ಈ ಪತ್ರವನ್ನು ಮುಖ್ಯ ನ್ಯಾಯಾಮೂರ್ತಿಗಳಿಗೆ ಇ-ಮೇಲ್ ಮೂಲಕ ಯುವತಿ ದೂರು ನೀಡಿದ್ದಳು. “ನಾನು ಅತ್ಯಾಚಾರ ಸಂತ್ರಸ್ತೆ. ಈ ಸಂಬಂಧ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಐಟಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಪ್ರಮುಖ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ’.

“ರಮೇಶ್‌ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ನನಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ರಮೇಶ್‌ ಜಾರಕಿಹೊಳಿ ಮತ್ತು ಅವರ ಬೆಂಬಲಿಗರಿಂದ ಬೆದರಿಕೆ ಇದೆ. ನನ್ನ ಪೋಷಕರ ಮೂಲಕ ನನ್ನನ್ನು ನಿಯಂತ್ರಿಸುತ್ತಿದ್ದಾರೆ. ಎಸ್‌ಐಟಿಯಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ಯಾವುದೇ ರಕ್ಷಣೆ ಇಲ್ಲ. ತನಿಖಾ ಸಂಸ್ಥೆ ಮೇಲೆ ಮಾಜಿ ಸಚಿವರು ಪ್ರಭಾವ ಬೀರಿದ್ದಾರೆ. ಈಗಾಗಲೇ ಅವರು ಸಾಕ್ಷ್ಯ ನಾಶ ಪಡಿಸುತ್ತಿದ್ದಾರೆ. ಪ್ರಕರಣದಲ್ಲಿ ನನ್ನ ತಂದೆ ತಾಯಿಯಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ. ನನಗೆ ಮತ್ತು ನನ್ನ ಪಾಲಕರಿಗೆ ರಕ್ಷಣೆ ಒದಗಿಸಬೇಕು’ ಎಂದು ಮನವಿ ಮಾಡಿದ್ದಳು.

Advertisement
Advertisement

Udayavani is now on Telegram. Click here to join our channel and stay updated with the latest news.

Next