Advertisement

ರಂಜಾನ್‌ ಸರಳವಾಗಿ ಆಚರಿಸಿ

02:21 PM May 10, 2020 | Suhan S |

ಮುಂಡರಗಿ: ದೇಶಾದ್ಯಂತ ಕೋವಿಡ್ 19  ವೈರಸ್‌ ಭೀತಿ ಹೆಚ್ಚುತ್ತಿದೆ. ಆದ ಕಾರಣ ರಂಜಾನ್‌ ಹಬ್ಬವನ್ನುಬಡವರಿಗೆ ದಾನ, ಧರ್ಮ ಮಾಡುವ ಮೂಲಕ ಮನೆಯಲ್ಲಿ ಸರಳವಾಗಿ, ಸಾಂಕೇತಿಕವಾಗಿ ಆಚರಣೆ ಮಾಡಬೇಕು ಎಂದು ಮುಸ್ಲಿಂ ಸಮಾಜದ ಮುಖಂಡ ನಬೀಸಾಬ್‌ ಕೆಲೂರು ಹೇಳಿದರು.

Advertisement

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಆರೋಗ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎಲ್ಲರೂ ಪರಸ್ಪರ ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಸಾಂಪ್ರದಾಯಿಕವಾಗಿ ಹಬ್ಬವನ್ನು ಮನೆಯಲ್ಲಿ ಆಚರಿಸುವ ಮೂಲಕ ಸಮಾಜಕ್ಕೆ ದೇಶಕ್ಕೆ ನಮ್ಮದೆ ಆದಂತಹ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿ ಆಗುವ ಕೆಲಸ ಮಾಡಬೇಕು. ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಸಮಾಜ ಬಾಂಧವರು ಮೆರವಣಿಗೆ ಮಾಡುವುದು, ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದು ರದ್ದು ಪಡಿಸಲಾಗಿದೆ.

ಎಲ್ಲರೂ ತಮ್ಮ-ತಮ್ಮ ಪ್ರಾರ್ಥನೆ ಸಲ್ಲಿಸಿ, ಮನೆಯಲ್ಲಿ ಹಬ್ಬವನ್ನು ಸಾಂಕೇತಿಕವಾಗಿ ಆಚರಿಸಬೇಕು. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಮೂಲಕ ರಂಜಾನ್‌ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ಮುಸ್ಲಿಂ ಸಮಾಜದ ಎಲ್ಲ ಹಿರಿಯರು ಕೂಡಿಕೊಂಡು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಹ್ಮದಸಾಬ್‌ ತಳಗಡೆ, ರಿಯಾಜ್‌ ತಪ್ಪಡಿ ಪತ್ರಿಕಾಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next