Advertisement

ಹಳ್ಳಿಗಳಲ್ಲಿ ಸ್ಮಶಾನ ಜಾಗ: ಪಿಐಎಲ್‌ ವಜಾ

06:30 AM Nov 14, 2017 | |

ಬೆಂಗಳೂರು: ರಾಜ್ಯದಲ್ಲಿ ಸ್ಮಶಾನವಿಲ್ಲದ ಸೂಕ್ತ ಹಳ್ಳಿಗಳಲ್ಲಿ ಸ್ಮಶಾನಗಳಿಗೆ ಜಾಗ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ, ಕಂದಾಯ ಇಲಾಖೆ ಹಾಗೂ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Advertisement

ಈ ಸಂಬಂಧ ಆರ್‌.ಟಿ ನಗರದ ಮೊಹಮದ್‌ ಇಕ್ಬಾಲ್‌ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ಪಿ.ಎಸ್‌ ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಪೀಠ, ರಾಜ್ಯದ ಯಾವ ಹಳ್ಳಿಗಳಲ್ಲಿ ಸ್ಮಶಾನ ಜಾಗದ ಕೊರತೆಯಿದೆ ಎಂಬ ಮಾಹಿತಿಯನ್ನು ಸ್ಪಷ್ಟಪಡಿಸಿಲ್ಲ. ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳು ಲಗತ್ತಿಸಬೇಕು. ಇಲ್ಲವಾದಲ್ಲಿ ಸರ್ಕಾರಕ್ಕೆ ಹೇಗೆ ನಿರ್ದೇಶನ ನೀಡಲು ಸಾಧ್ಯ ಎಂದು ಅರ್ಜಿದಾರರನ್ನು ಪ್ರಶ್ನಿಸಿತು. ಇಂಥ ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಎಂದು ಅರ್ಜಿ ವಜಾಗೊಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next