Advertisement

Ration: ಉಚಿತ ಪಡಿತರ ಯೋಜನೆ 5 ವರ್ಷ ವಿಸ್ತರಿಸಿದ ಕೇಂದ್ರ

11:56 PM Nov 04, 2023 | Pranav MS |

ಹೊಸದಿಲ್ಲಿ: ದೇಶದ ಬಡವರ ಅನುಕೂಲಕ್ಕಾಗಿ ಕೇಂದ್ರ ಸರಕಾರ ಜಾರಿ ಮಾಡಿರುವ ಉಚಿತ ಪಡಿತರ ಯೋಜನೆ ಮುಂದಿನ 5 ವರ್ಷಗಳ ಕಾಲ ವಿಸ್ತರಣೆಯಾಗಲಿದೆ.

Advertisement

ಶನಿವಾರ ಛತ್ತೀಸ್‌ಗಢದಲ್ಲಿ ಚುನಾವಣ ರ್ಯಾಲಿ ವೇಳೆ ಸ್ವತಃ ಪ್ರಧಾನಿ ಮೋದಿಯವರೇ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೇಂದ್ರ ಸರಕಾರಕ್ಕೆ ಸುಮಾರು 2 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಡಿ. 31ರಂದು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯ ಅವಧಿ ಪೂರ್ಣಗೊಳ್ಳಲಿದ್ದು, ಅದಕ್ಕೂ ಮೊದಲೇ ಯೋಜನೆ ವಿಸ್ತರಣೆಯ ಘೋಷಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next