Advertisement

Jairam Ramesh; ಇ.ಡಿ. ಬಳಸಿ ಕೇಂದ್ರದಿಂದ ದಾಳಿ: ಕಾಂಗ್ರೆಸ್‌ ಆಕ್ರೋಶ

09:52 PM Oct 01, 2024 | Team Udayavani |

ನವದೆಹಲಿ: ಇ.ಡಿ., ಸಿಬಿಐಗಳನ್ನು ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರ ದಾಳಿ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಇ.ಡಿ. ಬಿಜೆಪಿಯ ಎಲೆಕ್ಷನ್‌ ಡಿಪಾರ್ಟ್‌ಮೆಂಟ್‌ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಆರೋಪಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದ ಜನರು ಬಿಜೆಪಿಗೆ ಬಹುಮತ ನೀಡದ ಕಾರಣ, ಸಿದ್ದರಾಮಯ್ಯ ಅವರ ಮೇಲೆ ದಾಳಿ ನಡೆಸಲಾಗಿದೆ. ಇ.ಡಿ. ದಾಖಲಿಸಿರುವ ಪ್ರಕರಣ ಸಂಪೂರ್ಣವಾಗಿ ರಾಜಕೀಯ ದ್ವೇಷದಿಂದ ಕೂಡಿದೆ. ಪ್ರಜಾಪ್ರಭುತ್ವದಿಂದ ಆಯ್ಕೆಯಾದ ಸರ್ಕಾರವನ್ನು ಉರುಳಿಸುವ ಕೆಲಸ ಮಾಡಲಾಗುತ್ತಿದೆ. ನಾವು ಇದಕ್ಕೆ ಹೆದರುವುದಿಲ್ಲ. ಸತ್ಯ ಆಚೆ ಬರುತ್ತದೆ. ನಾವು ನೀಡಿರುವ ಗ್ಯಾರಂಟಿಗಳನ್ನು ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದು ಹೇಗೆ ಎಂದು ಸಂಸದ ಅಭಿಷೇಕ್‌ ಮನು ಸಿಂಘ್ವಿ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next