Advertisement

ದಂಡ ಕಡಿತಕ್ಕೆ ಕೇಂದ್ರದ ಅಡ್ಡಿ?

01:38 AM Sep 13, 2019 | Team Udayavani |

ನವದೆಹಲಿ: ನೂತನ ಸಂಚಾರಿ ನಿಯಮಗಳಲ್ಲಿ ವಿಧಿಸಲಾಗಿರುವ ದಂಡವನ್ನು ಕಡಿಮೆ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ಸಲಹೆ ಪಡೆಯಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಿರ್ಧರಿಸಿದೆ.

Advertisement

ಗುಜರಾತ್‌ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ದಂಡದ ಮೊತ್ತ ಕಡಿಮೆ ಮಾಡಲು ನಿರ್ಧರಿಸಿದ್ದು, ಕರ್ನಾಟಕ, ಉತ್ತರಪ್ರದೇಶ, ಉತ್ತರಾಖಂಡ ಕೂಡ ಈ ಕುರಿತು ಪರಿಶೀಲನೆ ನಡೆಸುತ್ತಿರುವ ನಡುವೆಯೇ ಹೆದ್ದಾರಿ ಸಚಿವಾಲಯ ಈ ಕ್ರಮಕ್ಕೆ ಮುಂದಾಗಿದೆ. ದೇಶದಲ್ಲಿ ಜಾರಿಯಾಗಿರುವ ಪರಿಷ್ಕೃತ ನಿಯಮಗಳ ಬಗ್ಗೆ ಸ್ವಾಗತ ಹಾಗೂ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ರಾಜ್ಯಗಳ ನಿರ್ಧಾರದ ಬಗ್ಗೆ ಕಾನೂನು ಸಚಿವಾಲಯದ ಅಭಿಪ್ರಾಯ ಕೇಳಲು ನಿರ್ಧರಿಸಲಾಗಿದೆ ಎಂದು ರಸ್ತೆ ಸಾರಿಗೆ ಸಚಿವಾಲಯದ ಅಧಿಕಾರಿ ಹೇಳಿದ್ದಾರೆ. ಸಚಿವಾಲಯ ಅಭಿಪ್ರಾಯ ತಿಳಿಸಿದ ಬಳಿಕ ರಾಜ್ಯಗಳ ಅಧಿಕಾರ ಏನೆಂಬುದು ಸ್ಪಷ್ಟವಾಗಲಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next