Advertisement
ನಗರದಲ್ಲಿ ಗುರುವಾರ ಕರ್ನಾಟಕ ಪ್ಲ್ರಾಂಟರ್ ಅಸೋಸಿಯೇಷನ್ (ಕೆಪಿಎ) ಹಮ್ಮಿಕೊಂಡಿದ್ದ 60ನೇ ವಾರ್ಷಿಕ ಸಮ್ಮೇಳನ ಕಾರ್ಯಕ್ರಮಕ್ಕೆ ವಿಡಿಯೋ ಸಂದೇಶದ ಮೂಲಕ ಶುಭ ಹಾರೈಸಿದ ಅವರು, ಪ್ರವಾಹದಿಂದ ಕೊಡುಗು ಭಾಗದಲ್ಲಿ ಉಂಟಾಗಿ ವಾಣಿಜ್ಯ ಬೆಳೆ ತೋಟಗಳು ಹಾಳಾಗಿವೆ. ಅದರಿಂದ ಆಗಿರುವ ನಷ್ಟ ಹಾಗೂ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದು, ಕೇಂದ್ರ ಸರ್ಕಾರದಿಂದ ಅವುಗಳ ಪರಿಹಾರ ಮಾಡುವ ಪ್ರಯತ್ನ ಮಾಡಲಾಗುವುದು ಎಂದರು. ಕೊಡಗು ಭಾಗದಲ್ಲಿ ಕಾಫಿ, ಟೀ, ಮೆಣಸು ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತಂತೆ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿದ್ದು, ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಸೋಸಿಯೇಷನ್ ಪ್ರಸ್ತಾವನೆ ಸಲ್ಲಿಸಿದರೆ ಕೂಡಲೇ ಅಗತ್ಯ ಕ್ರಮ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
Advertisement
ಕೊಡಗು ಬೆಳೆಗಾರರಿಗೆ ಕೇಂದ್ರದ ನೆರವು
06:00 AM Nov 02, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.