Advertisement

ಕೊಡಗು ಬೆಳೆಗಾರರಿಗೆ ಕೇಂದ್ರದ ನೆರವು

06:00 AM Nov 02, 2018 | Team Udayavani |

ಬೆಂಗಳೂರು: ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಎಚ್‌ .ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಸುರೇಶ್‌ ಪ್ರಭು ಭರವಸೆ ನೀಡಿದರು.

Advertisement

ನಗರದಲ್ಲಿ ಗುರುವಾರ ಕರ್ನಾಟಕ ಪ್ಲ್ರಾಂಟರ್ ಅಸೋಸಿಯೇಷನ್‌ (ಕೆಪಿಎ) ಹಮ್ಮಿಕೊಂಡಿದ್ದ 60ನೇ ವಾರ್ಷಿಕ ಸಮ್ಮೇಳನ ಕಾರ್ಯಕ್ರಮಕ್ಕೆ ವಿಡಿಯೋ ಸಂದೇಶದ ಮೂಲಕ ಶುಭ ಹಾರೈಸಿದ ಅವರು, ಪ್ರವಾಹದಿಂದ ಕೊಡುಗು ಭಾಗದಲ್ಲಿ ಉಂಟಾಗಿ ವಾಣಿಜ್ಯ ಬೆಳೆ ತೋಟಗಳು ಹಾಳಾಗಿವೆ. ಅದರಿಂದ ಆಗಿರುವ ನಷ್ಟ ಹಾಗೂ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದು, ಕೇಂದ್ರ ಸರ್ಕಾರದಿಂದ ಅವುಗಳ ಪರಿಹಾರ ಮಾಡುವ ಪ್ರಯತ್ನ ಮಾಡಲಾಗುವುದು ಎಂದರು. ಕೊಡಗು ಭಾಗದಲ್ಲಿ ಕಾಫಿ,  ಟೀ, ಮೆಣಸು ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತಂತೆ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿದ್ದು, ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಸೋಸಿಯೇಷನ್‌ ಪ್ರಸ್ತಾವನೆ ಸಲ್ಲಿಸಿದರೆ ಕೂಡಲೇ ಅಗತ್ಯ ಕ್ರಮ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯಸಭಾ ಸದಸ್ಯ ರಾಜೀವ್‌ ಗೌಡ ಮಾತನಾಡಿ, ವಿಶ್ವದಾದ್ಯಂತ ನೈಸರ್ಗಿಕ ಕಾಫಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಅದರ ನಡುವೆಯ ಕಾಫಿ ಹಾಗೂ ಇತರೆ ತೋಟಗಾರಿಕಾ ಬೆಳೆಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದು, ಅವುಗಳ ಪರಿಹಾರಕ್ಕೆ ಸರ್ಕಾರಗಳು ಮುಂದಾಗಬೇಕಿದೆ ಎಂದರು. ಅಸೋಸಿಯೇಷನ್‌ ಅಧ್ಯಕ್ಷ ಎಚ್‌ .ಟಿ.ಪ್ರಮೋದ್‌ ಕಾಫಿ, ಟೀ, ಮೆಣಸು ಸೇರಿದಂತೆ ವಿವಿಧ ವಾಣಿಜ್ಯ ಬೆಳ  ಸ್ಥಿತಿಗತಿ ಹಾಗೂ ಅವುಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next