Advertisement

ಸದಾನಂದ ಗೌಡಗೆ ರಸಗೊಬ್ಬರ ಖಾತೆ

04:30 AM Nov 14, 2018 | Karthik A |

ಹೊಸದಿಲ್ಲಿ: ಸಚಿವ ಅನಂತ ಕುಮಾರ್‌ ನಿಧನದಿಂದ ತೆರವಾಗಿರುವ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಕೇಂದ್ರ ಸಾಂಖ್ಯಿಕ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ರಾಸಾಯನಿಕ, ರಸಗೊಬ್ಬರ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್‌ ತೋಮರ್‌ಗೆ ಸಂಸದೀಯ ವ್ಯವಹಾರಗಳ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ.

Advertisement

ಕೇಂದ್ರ ಸಂಪುಟ ಸಂತಾಪ
ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್‌ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ತೀವ್ರ ಶೋಕ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ 2 ನಿಮಿಷ ಮೌನ ಆಚರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next