Advertisement

ರೈತರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ

12:38 AM Nov 23, 2021 | Team Udayavani |

ಮಡಿಕೇರಿ: ಕೃಷಿಗೆ ಸಂಬಂಧಿಸಿದಂತೆ ರೈತರ ಹಿತ ಕಾಯಲು ಅಗತ್ಯವಿರುವ ಕಾನೂನುಗಳನ್ನು ರೂಪಿಸಲು ರಾಜ್ಯ ಸರಕಾರ ಗಳಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಕೇಂದ್ರ ಸರಕಾರ ಕೂಡ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದರು.

Advertisement

ಮಡಿಕೇರಿಯಲ್ಲಿ ಬಿಜೆಪಿಯ ಜನಸ್ವರಾಜ್‌ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿ
ಗಾರರೊಂದಿಗೆ ಮಾತನಾಡಿದರು. ಮೂರು ಕೃಷಿ ಮಸೂದೆಗಳನ್ನು ಸರಕಾರ ವಾಪಸು ಪಡೆದಿದ್ದರೂ ರೈತರ ಹಿತ ಕಾಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೇಂದ್ರ ಸರಕಾರ ಕೈಗೊಳ್ಳಲಿದೆ ಎಂದರು.

ಕೃಷಿ ಕಾಯ್ದೆ ರೂಪಿಸುವುದು 30 ವರ್ಷಗಳ ಹಿಂದಿನ ಬೇಡಿಕೆಯಾಗಿದ್ದು, ಬೇರೆಬೇರೆ ಸರಕಾರಗಳು ಅಧಿಕಾರದಲ್ಲಿದ್ದಾಗಲೂ ಚರ್ಚೆಯಾ ಗಿದೆ. ಅಲ್ಲದೆ ಬೇರೆ ಬೇರೆ ಸಮಿತಿಗಳು ನೀಡಿದ ವರದಿಯ ಆಧಾರದಲ್ಲೇ ಕಾಯ್ದೆಯನ್ನು ರೂಪಿಸಲಾಗಿದೆ. ಆದರೆ ಕಾಯ್ದೆ ಕುರಿತು ಜನತೆಗೆ ಮನವರಿಕೆಮಾಡಿಕೊಡುವಲ್ಲಿ ಕೊರೊನಾ ಕಾರಣದಿಂದ ಸ್ವಲ್ಪ ಹಿನ್ನಡೆಯಾಯಿತು ಎಂದು ಶೋಭಾ ಒಪ್ಪಿಕೊಂಡರು.

ಇದನ್ನೂ ಓದಿ:ಪ್ರವಾಹ ಪೀಡಿತ ಪ್ರದೇಶಗಳಿಗೆ ಇಲಾಖಾ ಸಚಿವರ ಭೇಟಿ: ಸಿಎಂ

ಮರು ಸಮೀಕ್ಷೆಗೆ ಆದೇಶ
ಕೊಡಗು ಸೇರಿದಂತೆ ರಾಜ್ಯದ ಕಾಫಿ ಬೆಳೆಯುವ ಜಿಲ್ಲೆಗಳಲ್ಲಿ ಈ ಬಾರಿ ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದಾಗಿ ಕಾಫಿ, ಅಡಿಕೆ ಹಾಗೂ ಭತ್ತದ ಬೆಳೆಗೆ ಭಾರೀ ಹಾನಿಯಾಗಿದೆ. ನಷ್ಟದ ಮರು ಸಮೀಕ್ಷೆ ನಡೆಸಿ ವರದಿ ನೀಡುವಂತೆ ವಾಣಿಜ್ಯ ಸಚಿವಾಲಯದ ಮೂಲಕ ಕಾಫಿ ಮಂಡಳಿಗೆ ಆದೇಶ ಕೊಡಿಸಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಅವರು ಜನ ಸ್ವರಾಜ್‌ ಸಮಾವೇಶದಲ್ಲಿ ಭರವಸೆ ನೀಡಿದರು.

Advertisement

ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸಚಿವರ ಗಮನಸೆಳೆದು, ಕಾಫಿ ಮಂಡಳಿ ಅಧಿಕಾರಿಗಳು ಸ್ಥಳ ಸಮೀಕ್ಷೆ ಮಾಡದೆ ಬೆಳೆಗಾರರೊಂದಿಗೆ ಉಡಾಫೆಯಿಂದ ವರ್ತಿಸುತ್ತಿದ್ದು, ಕಾಫಿ ಬೆಳೆ ಹಾನಿಯಾಗಿರುವ ಕೆಲವು ಗ್ರಾಮಗಳನ್ನೇ ಕೈಬಿಟ್ಟಿದ್ದಾರೆ. ಇದರಿಂದಾಗಿ ಕೊಡಗಿನ ಬಹುತೇಕ ಕಾಫಿ ಬೆಳೆಗಾರರು ಪರಿಹಾರದಿಂದ ವಂಚಿತರಾಗುವ ಸಂಭವವಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈ ಸಂಬಂಧ ಮರು ಸಮೀಕ್ಷೆಗೆ ಕೇಂದ್ರ
ಸರಕಾರದಿಂದಲೇ ಆದೇಶ ಹೊರಡಿಸ ಬೇಕೆಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next