Advertisement
ಅನನುಭವಿಗಳಿಗೆ ಮಣೆ: ಮಾಜಿ ಸಚಿವ ಪಲ್ಲಂರಾಜು ಮಾತನಾಡಿ, ರಫೇಲ್ ವಿಮಾನ ಖರೀದಿಯಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಫ್ರಾನ್ಸ್ ಸರ್ಕಾರದೊಂದಿಗೆ ಭಾರತ ಮಾಡಿಕೊಂಡ ಒಪ್ಪಂದವನ್ನು ಬಿಜೆಪಿ ಸರ್ಕಾರ ತಿದ್ದುವ ಮೂಲಕ ಭಾರೀ ಅವ್ಯವಹಾರ ನಡೆಸಿದೆ. ಯುಪಿಎ ಅವಧಿಯಲ್ಲಿನ ಒಪ್ಪಂದದಂತೆ ತಂತ್ರಜ್ಞಾನ ವರ್ಗಾವಣೆಯಿಂದ ಬೆಂಗಳೂರಿನ ಎಚ್ಎಎಲ್ ಕಾರ್ಖಾನೆಯು ಉದ್ಯೋಗ ಸೃಷ್ಟಿ ಮಾಡುವುದರ ಜೊತೆಗೆ ಆರ್ಥಿಕ ಅಭಿವೃದ್ಧಿಗೂ ಅನುಕೂಲವಾಗುತ್ತಿತ್ತು.
Related Articles
Advertisement
ಬದಲಿಗೆ 21ಸಾವಿರ ಕೋಟಿ ವೆಚ್ಚದಲ್ಲಿ ರಿಲಯನ್ಸ್ ಡಿಫೆನ್ಸ್ ಮತ್ತು ಇಂಜಿನಿಯರಿಂಗ್ ಲಿ. ನಿಂದ ಬಿಡಿ ಭಾಗಗಳನ್ನು ಕೊಳ್ಳುವ ಒಪ್ಪಂದ ಮಾಡಿಕೊಳ್ಳಲಾಯಿತು. ರಿಲಯನ್ಸ್ನ ಈ ನೂತನ ಕಂಪನಿಗೆ ವಿಮಾನಗಳ ತಯಾರಿಕೆಯಲ್ಲಿ ಯಾವುದೇ ಅನುಭವವೂ ಇಲ್ಲ ಮತ್ತು ತಂತ್ರಜ್ಞಾನವೂ ತಿಳಿದಿಲ್ಲ. ಹೀಗಾಗಿ ಈ ವ್ಯವಹಾರ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ದೂರಿದರು.
ಮೂರರಷ್ಟು ಬೆಲೆ ನಿಗದಿ: ಯುಪಿಎ ಒಪ್ಪಂದದ ಪ್ರಕಾರ ಪ್ರತಿ ವಿಮಾನಕ್ಕೆ 526.10ಕೋಟಿ ಬೆಲೆ ಇತ್ತು. ಆದರೆ, ಮೋದಿಯವರು ಮಾಡಿಕೊಂಡ ಒಪ್ಪಂದದಂತೆ ಪ್ರತಿ ವಿಮಾನಕ್ಕೆ 1670.70ಕೋಟಿ ಬೆಲೆ ನಿಗದಿಯಾಗಿದೆ. ಆರು ವರ್ಷಗಳಲ್ಲಿ ಇಷ್ಟು ದುಬಾರಿ ವೆಚ್ಚದಲ್ಲಿ ಖರೀದಿಸುವ ಅವಶ್ಯಕತೆಯ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೇ, ದೇಶಕ್ಕೆ ಅತ್ಯಂತ ಅವಶ್ಯಕವಾಗಿರುವ ತಂತ್ರಜ್ಞಾನ ವರ್ಗಾವಣೆಯೂ ಇಲ್ಲದೇ ಇರುವುದು ಸ್ವದೇಶಿ ಉತ್ಪಾದನೆಗೆ ಹಿನ್ನಡೆಯಾಗಿದೆ ಎಂದು ಟೀಕಿಸಿದರು.
ಹಾದಿ ತಪ್ಪಿಸಲಾಗ್ತಿದೆ: ಯುಪಿಎ ಸರ್ಕಾರವು ಮಿರಾಜ್ ಮತ್ತು ಸುಕೋಯಿ ವಿಮಾನಗಳನ್ನು ಖರೀದಿಸುವಲ್ಲಿ ಸಂಸತ್ತಿಗೆ ಮತ್ತು ದೇಶಕ್ಕೆ ಅದರ ಬೆಲೆಗಳನ್ನು ತಿಳಿಸಿ ಪಾರದರ್ಶಕ ವ್ಯವಹಾರ ಮಾಡಿತ್ತು. ಆದರೆ, ಮೋದಿಯವರ ಸರ್ಕಾರ ರಫೇಲ್ ವಿಮಾನದ ಬೆಲೆ 670 ಕೋಟಿ ರೂ. ಎಂದು ಸಂಸತ್ತಿಗೆ ತಿಳಿಸಿದ್ದರೂ ದಸ್ಸಾಲ್ಟ್ ಕಂಪನಿಯ ವಾರ್ಷಿಕ ವರದಿಯಲ್ಲಿ ಇದರ ಬೆಲೆ 1670 ಕೋಟಿ ಎಂದು ನಮೂದಿಸಿರುವುದು ಇದರಲ್ಲಿ ಪಾರದರ್ಶಕ ವ್ಯವಹಾರ ನಡೆದಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಹರಿಹಾಯ್ದರು.
ರಫೇಲ್ ವಿಮಾನ ಖರೀದಿ ವ್ಯವಹಾರ 40 ಸಾವಿರ ಕೋಟಿ ರೂ.ಗಳ ಬಹು ದೊಡ್ಡ ಹಗರಣ. ಮೋದಿ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ನಡೆಸಿರುವ ಈ ಹಗರಣವನ್ನು ಕಾಂಗ್ರೆಸ್ ಪಕ್ಷ ಜನತೆಗೆ ತಿಳಿಸುವ ಕೆಲಸ ಮಾಡುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ನಾವು ಸಚ್ಛಾರಿತ್ರ್ಯರು, ಪ್ರಾಮಾಣಿಕರು ಎನ್ನುತ್ತಿದ್ದವರ ಬಂಡವಾಳ ಬಯಲು ಮಾಡುತ್ತೇವೆ. ಬೀದಿಗಿಳಿದು ಹೋರಾಡುತ್ತೇವೆ.-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ