Advertisement

ಸಿಬಿಐ ಅಧಿಕಾರಿಗಳದ್ದು ಬೆಕ್ಕಿನ ಜಗಳ: ಸುಪ್ರೀಂಗೆ ಕೇಂದ್ರ

06:00 AM Dec 06, 2018 | |

ಹೊಸದಿಲ್ಲಿ: ಕೇಂದ್ರ ತನಿಖಾ ಸಂಸ್ಥೆ, ಸಿಬಿಐನ ಇಬ್ಬರು ಉನ್ನತ ಅಧಿಕಾರಿಗಳು ಬೆಕ್ಕಿನಂತೆ ಜಗಳವಾಡುತ್ತಿದ್ದರು. ಇದರಿಂದಾಗಿ ಕೇಂದ್ರ, ತನಿಖಾ ಸಂಸ್ಥೆ ನಗೆಪಾಟಲಿಗೀಡಾಗುವಂತಾಗಿತ್ತು. ಅದ್ದರಿಂದಲೇ ಮಧ್ಯಪ್ರವೇಶಿಸಬೇಕಾಯಿತು ಎಂದು ಸುಪ್ರೀಂಕೋರ್ಟ್‌ಗೆ ಸರ್ಕಾರ ಬುಧವಾರ ಅರಿಕೆ ಮಾಡಿಕೊಂಡಿದೆ. ಸಂಸ್ಥೆಯ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸಿಬಿಐ ಮುಖ್ಯಸ್ಥ ಅಲೋಕ್‌ ವರ್ಮಾರನ್ನು ಮತ್ತು  ವಿಶೇಷ ಸನ್ನಿವೇಶಗಳಿಂದಾಗಿ ವಿಶೇಷ ನಿರ್ದೇಶಕ ರಾಕೇಶ್‌ ಅಸ್ತಾನರನ್ನು  ರಜೆಯ ಮೇಲೆ ಕಳುಹಿಸಲಾಗಿದೆ. ಈ ನಿರ್ಧಾರವನ್ನು ಸಿವಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕೈಗೊಂಡಿದೆ. ತನ್ನನ್ನು ರಜೆಯ ಮೇಲೆ ಕಳುಹಿಸಿರುವುದನ್ನು ಪ್ರಶ್ನಿಸಿ ಅಲೋಕ್‌ ವರ್ಮಾ ಸಲ್ಲಿಸಿದ ದೂರಿನ ವಿಚಾರಣೆಯ ವೇಳೆ ಕೇಂದ್ರ ಈ ಸ್ಪಷ್ಟನೆ ನೀಡಿದೆ.  ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಕಾನೂನು ಉಲ್ಲಂಘನೆ ಮಾಡಿದೆ ಎಂದು ವರ್ಮಾ ಪರ ವಕೀಲ ಫಾಲಿ ನಾರಿಮನ್‌ ವಾದಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next