Advertisement

‘ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರಕಾರ ಮುಂದಾಗಲಿ’

08:15 AM Dec 24, 2018 | Team Udayavani |

ಸೊರಬ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲು ಕೇಂದ್ರ ಸರಕಾರ ರಾಮಮಂದಿರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶ್ರೀ ರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಆಗ್ರಹಿಸಿದರು.

Advertisement

ಅಭಿವೃದ್ಧಿ ಮತ್ತು ರಾಮ ಮಂದಿರ ನಿರ್ಮಾಣದ ದೃಷ್ಟಿಯಿಂದ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಅಟಲ್‌ ಬಿಹಾರಿ ವಾಜಪೇಯಿ ಅವರನ್ನು ಸಹ ರಾಮ ಮಂದಿರ ನಿರ್ಮಾಣ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಿಯಾಗಿ ಮಾಡಲಾಗಿತ್ತು. ಆದರೆ ಅವರು ಪ್ರಧಾನಿಯಾದ ಅನಂತರ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗದೇ ಇದ್ದುದರಿಂದ ಅವರು ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಕಳೆದ ಮೂವತ್ತು ವರ್ಷಗಳಿಂದಲೂ ಶ್ರೀ ರಾಮ ಮಂದಿರ ನಿರ್ಮಾಣದ ಆಂದೋಲನವನ್ನು ಮಾಡಿಕೊಂಡು ಬರುತ್ತಿದ್ದೇವೆ. ಈಗ ಈ ಆಂದೋಲನದ ಆವಶ್ಯಕತೆ ಇಲ್ಲ. ನರೇಂದ್ರ ಮೋದಿಯವರ ಆವಶ್ಯಕತೆ ದೇಶಕ್ಕೂ ಇದೆ. ಆದ್ದರಿಂದ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಅಧ್ಯಾದೇಶ ತಂದು ರಾಮ ಮಂದಿರ ನಿರ್ಮಾಣ ಮಾಡಿ ಮತ್ತೂಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next