Advertisement

Kalaburagi; ಕೇಂದ್ರ ಕಾರಾಗೃಹ ಮೇಲೆ ಪೊಲೀಸ್ ಮಿಂಚಿನ ದಾಳಿ

09:29 AM Apr 12, 2023 | Team Udayavani |

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹ ( ಜೈಲು)ದ ಮೇಲೆ ಬುಧವಾರ ಬೆಳಗಿನ ಜಾವ ಕಲಬುರಗಿ ಮಹಾನಗರ ಪೊಲೀಸ್ ಉಪ ಆಯುಕ್ತರ ನೇತೃತ್ವದಲ್ಲಿ ಮಿಂಚಿನ ದಾಳಿ ನಡೆದಿದೆ.

Advertisement

ಪೊಲೀಸ್ ಆಯುಕ್ತ ಆರ್. ಚೇತನ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತ ಅಡ್ಡೂರು ಶ್ರೀ ನಿವಾಸಲು ನೇತೃತ್ವದಲ್ಲಿ ತಂಡಗಳ ದಾಳಿ ನಡೆಸಿ ವ್ಯಾಪಕ ಶೋಧ ನಡೆಸಲಾಗಿದೆ.

ಬೆಳಗಿನ ಜಾವ 5.30ರ ಸುಮಾರಿಗೆ 120 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿ ನಡೆಸಿ ಎರಡು ಗಂಟೆಗಳ ಕಾಲ ವ್ಯಾಪಕ ಶೋಧ ನಡೆಸಿದೆ.

ಚುನಾವಣೆ ಹಿನ್ನೆಲೆಯಲ್ಲಿ ಜೈಲಿನಿಂದ ಕೈದಿಗಳು ಮೊಬೈಲ್ ಕರೆ ಮಾಡಿ ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ಮಹತ್ವ ಪಡೆದುಕೊಂಡಿದೆ.

ದಾಳಿಯಲ್ಲಿ ಕಾರಾಗೃಹ ಸಂಪೂರ್ಣ ಎಲ್ಲವನ್ನು ಶೋಧಿಸಲಾಗಿದೆಯಲ್ಲದೇ ಪ್ರತಿಯೊಬ್ಬ ಕೈದಿಯನ್ನು ಸೂಕ್ಷ್ಮವಾಗಿ ತಪಾಸಣೆ ಗೆ ಒಳಪಡಿಸಲಾಗಿದೆ. ಪ್ರಮುಖವಾಗಿ ಎಲ್ಲರಿಗೂ ಎಚ್ಚರಿಕೆ ನೀಡಲಾಗಿದೆ.

Advertisement

ದಾಳಿಯಲ್ಲಿ ಏನೇನು ಪತ್ತೆ ಯಾಗಿದೆ ಎಂಬುದನ್ನು ಬಹಿರಂಗ ಪಡಿಸಿಲ್ಲ ದಾಳಿ ನಂತರ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ರಂಗನಾಥ್ ಕಾರಾಗೃಹಕ್ಕೆ ಆಗಮಿಸಿ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next