Advertisement

ಕೇಂದ್ರ ಮಾದರಿ ವೇತನ ನೀಡುವ ಭರವಸೆ

05:33 PM Mar 19, 2022 | Team Udayavani |

ಗುರುಮಠಕಲ್‌: ಕೇಂದ್ರದ ಮಾದರಿ ವೇತನ ನೀಡುವ ಸ್ಪಷ್ಟ ಭರವಸೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷ ಕುಮಾರ್‌ ನಿರೇಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಅವರ ಸುದೀರ್ಘ‌ ಮನವಿಯಂತೆ ವಿಧಾನಸಭೆ ಅಧಿವೇಶನದ ಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಉತ್ತರಿಸುತ್ತ, ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ನೀಡುವ ಸ್ಪಷ್ಟ ಭರವಸೆ ಮುಖ್ಯಮಂತ್ರಿ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೂ ಪರಿಷ್ಕರಣೆ ಮಾಡಲು ಅಧಿಕಾರಿಗಳ ವೇತನ ಸಮಿತಿ ಹಾಗೂ ವೇತನ ಆಯೋಗ ರಚಿಸುವ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಈ ನಿರ್ಧಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ 30 ಲಕ್ಷ ಕುಟುಂಬ ಸದಸ್ಯರಿಗೆ ಅನುಕೂಲವಾಗಲಿದೆ.

ಸರ್ಕಾರದ ಈ ನಿರ್ಧಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿ ಪ್ರಥಮ ಹಾಗೂ ಐತಿಹಾಸಿಕವಾಗಿದ್ದು, ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಅವರಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next