Advertisement

ಪ್ರವಾಹ ಪೀಡಿತ ಪ್ರದೇಶದ ವಸ್ತುಸ್ಥಿತಿ ಪರಿಶೀಲನೆಗಾಗಿ ಸೆ.7ರಂದು ರಾಜ್ಯಕ್ಕೆ ಕೇಂದ್ರ ತಂಡ

02:39 PM Sep 03, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಹಾಗೂ ಪ್ರವಾಹ ಪೀಡಿತ ಪ್ರದೇಶದ ವಸ್ತುಸ್ಥಿತಿ ಪರಿಶೀಲನೆಗಾಗಿ ಕೇಂದ್ರ ತಂಡ ಸೆ.7ರಿಂದ 3 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

Advertisement

ವಿಧಾನ ಸೌಧ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕಾರ್ಯದರ್ಶಿ ಕೆ.ವಿ.ಪ್ರತಾಪ್ ನೇತೃತ್ವದ 6 ಜನರ ತಂಡವು ಅಧ್ಯಯನಕ್ಕೆ ತೆರಳುವ ಮುನ್ನ ಸೆ.7ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಿದೆ. ನಂತರ ಸೆ.8ರವರೆಗೆ ಕೊಡಗು, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರಕ್ಕೆ ತೆರಳಲಿದೆ. ಈ ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಸೆ.9ಕ್ಕೆ ಬೆಂಗಳೂರಿಗೆ ಮರಳಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈಗಾಗಲೇ ವೈಮಾನಿಕ ಸಮೀಕ್ಷೆ ಮಾಡಿದ್ದು, ಪ್ರವಾಹದ ನಷ್ಟದ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next