Advertisement

ಮಳೆಹಾನಿ ಪ್ರದೇಶಕ್ಕೆ ಕೇಂದ್ರ ತಂಡ

12:00 AM Sep 09, 2020 | mahesh |

ಮಡಿಕೇರಿ: ಕಳೆದ ಆಗಸ್ಟ್‌ ತಿಂಗಳಲ್ಲಿ ಉಂಟಾದ ಮಳೆ ಹಾನಿ ವೀಕ್ಷಿಸಲು ಮಂಗಳವಾರ ಕೇಂದ್ರ ಅಧ್ಯಯನ ತಂಡವು ಜಿಲ್ಲೆಗೆ ಆಗಮಿಸಿ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಮಳೆ ಹಾನಿಯಿಂದ ಉಂಟಾದ ನಷ್ಟದ ಬಗ್ಗೆ ಮಾಹಿತಿ ಪಡೆಯಿತು.

Advertisement

ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್‌, ಡಾ| ಭಾತೇಂìದು ಕುಮಾರ್‌ ಸಿಂಗ್‌ ಹಾಗೂ ಕೆ.ಎಸ್‌.ಡಿ.ಎಂ.ಎ. ಆಯುಕ್ತ ಮನೋಜ್‌ ರಂಜನ್‌ ಅವರನ್ನು ಒಳಗೊಂಡ ತಂಡವು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರಿಂದ ಮಾಹಿತಿ ಪಡೆಯಿತು. ಹಾನಿಗೆ ಸಂಬಂಧಿಸಿದ ಛಾಯಾಚಿತ್ರಗಳನ್ನು ವೀಕ್ಷಿಸಿತಲ್ಲದೇ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಬಾಗಲಕೋಟೆ, ಗದಗ…
ಕೇಂದ್ರ ತಂಡವು ಈ ಮೊದಲು ಅತಿವೃಷ್ಟಿಯಿಂದ ಕಂಗಾಲಾಗಿರುವ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ. ಅಲ್ಲದೆ ರೈತರ ಸಂಕಷ್ಟ ಆಲಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next