Advertisement

ರಾಷ್ಟ್ರೀಯ ಸಂಸ್ಕೃತ ಸಂಸ್ಥಾನಕ್ಕೆ ಕೇಂದ್ರೀಯ ವಿವಿ ಸ್ಥಾನ

11:14 PM Mar 20, 2020 | Lakshmi GovindaRaj |

ಶೃಂಗೇರಿ: ಭಾರತ ಸರ್ಕಾರದ ಅಧಿಧೀನದಲ್ಲಿರುವ ಡೀಮ್ಡ್ ಯೂನಿವರ್ಸಿಟಿ ರೂಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಲ್ಲಿನ ಮೆಣಸೆ ರಾಜೀವ್‌ಗಾಂಧಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನವನ್ನು ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲ ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.

Advertisement

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಸ್ಕೃತದ ಉಳಿದ ಎರಡು ಮಾನ್ವಿತ ವಿಶ್ವವಿದ್ಯಾಲಯಗಳಾಗಿದ್ದ ದೆಹಲಿಯ ಲಾಲ್‌ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಹಾಗೂ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠಗಳನ್ನೂ ಕೇಂದ್ರೀಯ ವಿಶ್ವವಿದ್ಯಾಲಯದ ದರ್ಜೆಗೇರಿಸಲಾಗಿದೆ. ಸಂಸ್ಕೃತಕ್ಕೆ ಇದುವರೆಗೂ ಒಂದೇ ಒಂದು ಕೇಂದ್ರೀಯ ವಿಶ್ವವಿದ್ಯಾಲಯ ಇರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next