Advertisement

ನೊಬೆಲ್‌ ಮಾದರಿಯಲ್ಲಿ “ವಿಜ್ಞಾನ ರತ್ನ’ಪ್ರಶಸ್ತಿ?

07:18 PM Sep 27, 2022 | Team Udayavani |

ನವದೆಹಲಿ: ಆರೋಗ್ಯ ಮತ್ತು ವಿಜ್ಞಾನ ಸಚಿವಾಲಯಗಳಲ್ಲಿ ನೀಡಲಾಗುತ್ತಿರುವ 300ಕ್ಕೂ ಅಧಿಕ ಪ್ರಶಸ್ತಿಗಳನ್ನು ರದ್ದುಪಡಿಸಿ, ಅವುಗಳ ಸ್ಥಾನದಲ್ಲಿ ನೊಬೆಲ್‌ ಮಾದರಿಯಲ್ಲಿ “ವಿಜ್ಞಾನ ರತ್ನ’ ಎಂಬ ಅತ್ಯುತ್ಕೃಷ್ಟ ಉನ್ನತ ಪ್ರಶಸ್ತಿ ಸ್ಥಾಪಿಸಲು ಸಲಹೆ ನೀಡಲಾಗಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಭಲ್ಲಾ ತಿಳಿಸಿದ್ದಾರೆ.

Advertisement

ವಿಜ್ಞಾನ ಮತ್ತು ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳ ಜತೆಗೆ ಸಭೆ ನಡೆಸಿದ ಸಂದರ್ಭದಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಲಾಗಿದೆ. ನೊಬೆಲ್‌ ಪ್ರಶಸ್ತಿ ಮಾದರಿಯಲ್ಲಿ “ವಿಜ್ಞಾನ ರತ್ನ’ ಎಂಬ ಅತ್ಯುನ್ನತ ಪ್ರಶಸ್ತಿ ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಅಭಿಪ್ರಾಯವನ್ನೂ ಪಡೆದುಕೊಳ್ಳಬಹುದು ಎಂದು ಭಲ್ಲಾ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಟ್ಟದಲ್ಲಿ ನೀಡಲಾಗುವ ಪ್ರಶಸ್ತಿಗಳಲ್ಲಿ ಪೂರ್ಣ ರೀತಿಯಲ್ಲಿ ಬದಲಾವಣೆ ಮಾಡಬೇಕು ಎಂದು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲಾಗಿದೆ.

ಭಾರತೀಯ ಕೈಗಾರಿಕಾ ಮತ್ತು ವಿಜ್ಞಾನ ಸಂಶೋಧನಾ ಮಂಡಳಿ (ಸಿಎಸ್‌ಐಆರ್‌) ನೀಡುವ ಶಾಂತಿ ಸ್ವರೂಪ್‌ ಭಟ್ನಾಗರ್‌ ಪ್ರಶಸ್ತಿಯನ್ನು ಮುಂದುವರಿಸಲಾಗುತ್ತದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next