Advertisement
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ತಂಡದ (ಎನ್ಐಎ) ಶಾಶ್ವತ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಕೇಂದ್ರ ಸರಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ.
Related Articles
Advertisement
ಆಗಸ್ಟ್ನಲ್ಲಿ ಬೆಂಗಳೂರಿನ ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆಗಳನ್ನು ಪರಿಶೀಲಿಸಿದಾಗ ದೇಶ ವಿರೋಧಿ ಸಂಘಟನೆಗಳು ರಾಜಧಾನಿಯನ್ನು ಆಶ್ರಯ ತಾಣವಾಗಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ದಕ್ಷಿಣ ಭಾರತದ ಪ್ರಮುಖ ಆರ್ಥಿಕ ಕೇಂದ್ರವಾಗಿರುವ ಬೆಂಗಳೂರು ನಗರವನ್ನು ಉಗ್ರಗಾಮಿ, ದೇಶ ವಿರೋಧಿ ಕೃತ್ಯಗಳಿಂದ ಮುಕ್ತವಾಗಿಡುವುದಕ್ಕೆ ಎನ್ಐಎ ಪ್ರಾದೇಶಿಕ ಕಚೇರಿಯ ಅಗತ್ಯವಿದೆ. ದೇಶವಿರೋಧಿ ಕೃತ್ಯಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳಲು ಶಾಶ್ವತ ಕಚೇರಿ ಆರಂಭಿಸಿ ಅಗತ್ಯ ಸಿಬಂದಿ ಒದಗಿಸುವಂತೆ ತೇಜಸ್ವಿ ಸೂರ್ಯ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದರು.
ಉದ್ದೇಶ ಏನು?ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕ ಉಗ್ರರ ಅಡಗುದಾಣ ಎಂದೇ ಹೇಳಲಾಗುತ್ತಿತ್ತು.
ಅಲ್ಲದೆ ಬೆಂಗಳೂರಿನಲ್ಲಿ ಕೆಲವು ಉಗ್ರ ಸಂಘಟನೆಗಳ ಸದಸ್ಯರು (ಸ್ಲೀಪರ್ ಸೆಲ್) ಸಕ್ರಿಯರಾಗಿದ್ದಾರೆ ಎಂಬುದು ಹಲವು ತನಿಖಾ ಸಂಸ್ಥೆಗಳಿಂದ ಬಯಲಾಗಿದೆ. ಆದರೂ ಶಂಕಿತರ ವಿರುದ್ಧ ಕಾರ್ಯಾಚರಣೆ ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಈ ಹಿಂದಿನ ಕೆಲವು ಗಲಭೆ, ದೊಂಬಿ ಪ್ರಕರಣಗಳಲ್ಲಿ ಶಂಕಿತ ಉಗ್ರರ ಕೈವಾಡ ಇರುವುದು ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಪ್ರತ್ಯೇಕ ಎನ್ಐಎ ಕಚೇರಿ ತೆರೆಯಬೇಕೆಂಬ ಕೂಗು ಇತ್ತು. ಬೆಂಗಳೂರಿನ ಎನ್ಐಎ ಕಚೇರಿಯಲ್ಲಿ ಸಂಪನ್ಮೂಲ ಕೊರತೆ ಇದೆ. ಹೀಗಾಗಿ ಎಲ್ಲ ಕಾರ್ಯಾಚರಣೆಗಳು ದಿಲ್ಲಿ, ಹೈದರಾಬಾದ್, ಚೆನ್ನೈ ಕಚೇರಿಗಳ ಮೂಲಕವೇ ನಡೆಯುತ್ತಿವೆ.