Advertisement

ಶಾಲೆಗಳನ್ನು ತೆರೆಯಲು ಕೇಂದ್ರದ ಮಾರ್ಗಸೂಚಿ

11:25 AM Sep 11, 2020 | Nagendra Trasi |

ನವದೆಹಲಿ: 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಇದೇ 21ರಿಂದ ಶಿಕ್ಷಕರ ಮಾರ್ಗದರ್ಶನ ಪಡೆಯುವ ಸಲುವಾಗಿ ಶಾಲೆಗಳಿಗೆ ಸ್ವಇಚ್ಛೆಯಿಂದ ತೆರಳಲು
ಈಗಾಗಲೇ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಮಂಗಳವಾರ ಇದಕ್ಕೆ ಸಂಬಂಧಿಸಿದ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ.

Advertisement

ತರಗತಿಗಳಲ್ಲಿ ವಿದ್ಯಾರ್ಥಿಗಳು ಕನಿಷ್ಠ 6 ಅಡಿ ಶಾರೀರಿಕ ಅಂತರ ಕಾಪಾಡಿಕೊಳ್ಳಬೇಕು. ಅದೇ ರೀತಿ, ಸಿಬ್ಬಂದಿ ಕೊಠಡಿ, ಕಚೇರಿಗಳು, ಗ್ರಂಥಾಲಯ, ಕೆಫೆಟೇರಿಯಾಗಳಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ. ಶಾಲೆಗಳಲ್ಲಿ ಅಸೆಂಬ್ಲಿ, ಕ್ರೀಡೆ ಮತ್ತಿತರ ಕಾರ್ಯಕ್ರಮ ನಡೆಸುವಂತಿಲ್ಲ.

ಕ್ಯಾಂಪಸ್‌ ನಲ್ಲಿ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗ, ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ. ಕಂಟೈನ್ಮೆಂಟ್‌ ವಲಯಗಳಲ್ಲಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗೆ ಆಗಮಿಸುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪರೀಕ್ಷಾ ಕೇಂದ್ರ ಬದಲಿಗೆ ಅವಕಾಶ
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ಭೂವಿಜ್ಞಾನಿ ಹುದ್ದೆಯ ಪರೀಕ್ಷಾ ಕೇಂದ್ರಗಳನ್ನು ಬದಲು ಮಾಡಿಕೊಳ್ಳುವ ಆಯ್ಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ. ಸೆ.8 ರಿಂದ 13ರ ವರೆಗೆ ಅಭ್ಯರ್ಥಿಗಳಿಗೆ ಈ ಅವಕಾಶ ಲಭ್ಯವಿರಲಿದೆ. upsconline.nic.inಗೆ ಲಾಗ್‌ ಇನ್‌ ಆಗುವ ಮೂಲಕ ಅಭ್ಯರ್ಥಿಗಳು ತಮ್ಮ ಇಚ್ಛೆಯ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಯುಪಿಎಸ್‌ಸಿ ಮಂಗಳವಾರ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next