Advertisement

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

08:10 PM Mar 26, 2023 | Team Udayavani |

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗ)ಯ ವೇತನ ಪರಿಷ್ಕರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.

Advertisement

ಏ.1ರಿಂದ ಅನ್ವಯವಾಗುವಂತೆ ಹೊಸ ವೇತನ ವ್ಯವಸ್ಥೆ ಜಾರಿಯಾಗಲಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಾ.24ರಂದೇ ಅಧಿಸೂಚನೆ ಹೊರಡಿಸಿದೆ.

ಏಳು ರೂ.ಗಳಿಂದ 26 ರೂ.ಗಳ ವರೆಗೆ ವೇತನ ಏರಿಕೆಯಾಗಲಿದೆ. ಹರ್ಯಾಣದಲ್ಲಿ ದೈನಂದಿನ ವೇತನ 357 ರೂ.ಗಳಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲೇ ಅತಿ ಹೆಚ್ಚು ವೇತನ ನೀಡಲಾಗುತ್ತಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್‌ಗಡದಲ್ಲಿ ಅತಿ ಕಡಿಮೆ ಅಂದರೆ 221 ರೂ. ಇವೆ.

2022-23ನೇ ಸಾಲಿನಲ್ಲಿ ರಾಜಸ್ಥಾನದಲ್ಲಿ ಮನರೇಗಾ ವ್ಯಾಪ್ತಿಯಲ್ಲಿ ವೇತನ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕರ್ನಾಟಕ, ಗೋವಾ, ಮೇಘಾಲಯ, ಮಣಿಪುರಗಳಲ್ಲಿ ಶೇ.2ರಿಂದ ಶೇ.10ರವರೆಗೆ ಏರಿಕೆಯಾಗಿವೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next