Advertisement

ರಾಜ್ಯಗಳಿಗೆ ಸೂಚನೆ

06:00 AM Sep 27, 2018 | Team Udayavani |

ನವದೆಹಲಿ: ಥಳಿಸಿ ಹತ್ಯೆಗೈದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇಂಥ ಪ್ರಕರಣಗಳನ್ನು ನಿಭಾಯಿಸಲು ಪ್ರತಿ ಜಿಲ್ಲೆಯಲ್ಲಿ ಎಸ್‌ಪಿ ಮಟ್ಟದ ಅಧಿಕಾರಿ ನೇಮಿಸಬೇಕು, ಗುಪ್ತಚರ ಕಾರ್ಯಪಡೆ ರಚಿಸಬೇಕು, ಸಾಮಾಜಿಕ ಮಾಧ್ಯಮಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಸೂಚನೆಯಲ್ಲಿ ವಿವರಿಸಲಾಗಿದೆ. ಅಲ್ಲದೆ ಕಾನೂನು ರೂಪಿಸುವ ಸಾಧ್ಯತೆಗಳ ಸಂಬಂಧ ಗೃಹ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ಸಚಿವರ ಸಮಿತಿಯು ಚರ್ಚೆ ನಡೆಸುತ್ತಿದೆ. 
 

Advertisement
Advertisement

Udayavani is now on Telegram. Click here to join our channel and stay updated with the latest news.

Next