Advertisement

ಬಂಗಾಳ ರೈತರ ಜತೆ ಕೇಂದ್ರ ಮುಕ್ತ ಮಾತುಕತೆ ನಡೆಸಲಿ: ರಾಕೇಶ್ ಟಿಕಾಯತ್

03:36 PM Jun 09, 2021 | Team Udayavani |

ನವದೆಹಲಿ:ಕೇಂದ್ರ ಸರ್ಕಾರ ಪಶ್ಚಿಮಬಂಗಾಳ ರೈತರ ಜತೆ ಮುಕ್ತ ಮಾತುಕತೆ ನಡೆಸಬೇಕು ಎಂದು ಭಾರತೀಯ ಕಿಸಾನ್ ಒಕ್ಕೂಟ(ಬಿಕೆಯು)ದ ಮುಖಂಡ ರಾಕೇಶ್ ಟಿಕಾಯತ್ ಅವರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭೇಟಿಗೂ ಮುನ್ನ ಈ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಲಾಕ್ ಡೌನ್ ಎಫೆಕ್ಟ್ : ನಿರುದ್ಯೋಗದಿಂದ ನೊಂದ ನಟ ಆತ್ಮಹತ್ಯೆಗೆ ಯತ್ನ!

ಮಮತಾ ಬ್ಯಾನರ್ಜಿ ಅವರೊಂದಿಗಿನ ಮಾತುಕತೆಯನ್ನು ಖಚಿತಪಡಿಸಿರುವ ಟಿಕಾಯತ್ ಅವರು, ಬುಧವಾರ(ಜೂನ್ 09) ಮಧ್ಯಾಹ್ನ ಪಶ್ಚಿಮಬಂಗಾಳ ಮುಖ್ಯಮಂತ್ರಿಯನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಈ ವೇಳೆ ನಾವು ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಸ್ಥಳೀಯ ರೈತರ ಸಮಸ್ಯೆ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.

ಕೇಂದ್ರ ಸರ್ಕಾರ ಪಶ್ಚಿಮಬಂಗಾಳ ರೈತರ ಜತೆ ಮುಕ್ತ ಮಾತುಕತೆ ನಡೆಸಬೇಕು. ನಿಯಮದ ಪ್ರಕಾರ ಉತ್ತರಪ್ರದೇಶದಲ್ಲಿ ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಸಭೆ ನಡೆಸುತ್ತಾರೆ. ಜಿಲ್ಲಾಧಿಕಾರಿಗಳು ಮತ್ತು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಹಾಜರಿರುತ್ತಾರೆ. ಈ ನಿಯಮವನ್ನು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೊಳಿಸಬೇಕು ಎಂದು ಹೇಳಿದರು.

ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕಾಯತ್ ಅವರು ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದರು. ಈ ವೇಳೆ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದ ನಂದಿಗ್ರಾಮದಲ್ಲಿಯೂ ಚುನಾವಣಾ ಪ್ರಚಾರ ನಡೆಸಿ ಬಿಜೆಪಿ ವಿರುದ್ಧ ಮತಚಲಾಯಿಸುವಂತೆ ತಿಳಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next