Advertisement

“ಕೊಲೆಗಾರ’ಬಣ್ಣನೆಗೆ ಕೇಂದ್ರ ಅಸಮಾಧಾನ

06:00 AM Sep 29, 2018 | |

ನವದೆಹಲಿ: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ಹತ್ತಿಕ್ಕಲು ತಮ್ಮ ಪ್ರಾಣವನ್ನೇ ಒತ್ತೆಯಿಟ್ಟು ಹೋರಾಡುತ್ತಿರುವ ಅಲ್ಲಿನ ಪೊಲೀಸ್‌ ಸಿಬ್ಬಂದಿಯನ್ನು ಕೊಲೆಗಾರರು ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯೊಬ್ಬರು ಹೇಳಿರುವುದು ಭದ್ರತಾ ಪಡೆಗಳ ಆತ್ಮವಿಶ್ವಾಸವನ್ನೇ ಅಲುಗಾಡಿಸುವಂತಿದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ ಮುಂದೆ ತನ್ನ ಅಸಮಾಧಾನವನ್ನು ಹೊರಹಾಕಿದೆ. 
ಮಣಿಪುರದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಭದ್ರತಾ ಪಡೆಗಳು ಶ್ರಮಿಸುತ್ತಿರುವ ವೇಳೆಯಲ್ಲೇ ನ್ಯಾಯಪೀಠದ ನ್ಯಾಯಾಧೀಶರು ಈ ರೀತಿಯ ಹೇಳಿಕೆ ನೀಡಿರುವುದು ವಿಪರ್ಯಾಸ ಎಂದು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲನ್‌ ಸುಪ್ರೀಂ ಕೋರ್ಟ್‌ನಲ್ಲಿ ಅಲವತ್ತುಕೊಂಡಿದ್ದಾರೆ. 

Advertisement

ಏತನ್ಮಧ್ಯೆ, ಮಣಿಪುರದ ಎನ್‌ಕೌಂಟರ್‌ಗಳಿಗೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ಮಣಿಪುರದ ಕೆಲ ಪೊಲೀಸ್‌ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಈ ಪ್ರಕರಣಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳದಂತೆ ಕೋರಿದ್ದು, ಈ ಅರ್ಜಿಯನ್ನು ಕೇಂದ್ರ ಸರ್ಕಾರ ಬೆಂಬಲಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next