ಮಣಿಪುರದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಭದ್ರತಾ ಪಡೆಗಳು ಶ್ರಮಿಸುತ್ತಿರುವ ವೇಳೆಯಲ್ಲೇ ನ್ಯಾಯಪೀಠದ ನ್ಯಾಯಾಧೀಶರು ಈ ರೀತಿಯ ಹೇಳಿಕೆ ನೀಡಿರುವುದು ವಿಪರ್ಯಾಸ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲನ್ ಸುಪ್ರೀಂ ಕೋರ್ಟ್ನಲ್ಲಿ ಅಲವತ್ತುಕೊಂಡಿದ್ದಾರೆ.
Advertisement
ಏತನ್ಮಧ್ಯೆ, ಮಣಿಪುರದ ಎನ್ಕೌಂಟರ್ಗಳಿಗೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ಮಣಿಪುರದ ಕೆಲ ಪೊಲೀಸ್ ಅಧಿಕಾರಿಗಳು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ, ಈ ಪ್ರಕರಣಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳದಂತೆ ಕೋರಿದ್ದು, ಈ ಅರ್ಜಿಯನ್ನು ಕೇಂದ್ರ ಸರ್ಕಾರ ಬೆಂಬಲಿಸಿದೆ.