Advertisement

Karnataka; ಅಕ್ಕಿ ನೀಡಬೇಕೆಂಬ ಮನವಿಯನ್ನು ಕೇಂದ್ರ ತಿರಸ್ಕರಿಸಿದೆ: ಸಚಿವ ಮುನಿಯಪ್ಪ

10:31 PM Jun 23, 2023 | Team Udayavani |

ಹೊಸದಿಲ್ಲಿ: ದಾಸ್ತಾನು ಕೊರತೆಯ ಹಿನ್ನೆಲೆಯಲ್ಲಿ ಉಚಿತ ಅಕ್ಕಿ ವಿತರಣೆಯ ಚುನಾವಣ ಭರವಸೆಯ ಅನುಷ್ಠಾನಕ್ಕಾಗಿ ಅಕ್ಕಿ ಪೂರೈಸುವ ಕರ್ನಾಟಕ ಸರಕಾರದ ಮನವಿಯನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿರಸ್ಕರಿಸಿದ್ದಾರೆ ಎಂದು ರಾಜ್ಯ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಶುಕ್ರವಾರ ಹೇಳಿದ್ದಾರೆ.

Advertisement

ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ಮಾತನಾಡಿದ ಮುನಿಯಪ್ಪ, ”ರಾಜ್ಯ ಸರಕಾರ ಬಿಪಿಎಲ್ ಕಾರ್ಡುದಾರರಿಗೆ ತಲಾ 10 ಕೆಜಿ ಉಚಿತ ಅಕ್ಕಿಯನ್ನು ಘೋಷಿಸಿದೆ. ಅದಕ್ಕಾಗಿ ಅಕ್ಕಿ ನೀಡುವಂತೆ ಮನವಿ ಮಾಡಿದೆವು. ನಾವು ಬೆಲೆ ತೆರಲು ಸಿದ್ಧರಿದ್ದೇವೆ ಎಂದರೂ ಸ್ಟಾಕ್ ಇಲ್ಲ, ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದು ರಾಜಕೀಯ ಪ್ರೇರಿತ. ಅಕ್ಕಿ ಲಭ್ಯವಿದ್ದರೂ ನೀಡಲು ಸಚಿವರು ಸಿದ್ಧರಿಲ್ಲ ಎಂದರು.

ರಾಜ್ಯ ಸರ್ಕಾರವು “ಅನ್ನ ಭಾಗ್ಯ” ಯೋಜನೆಗೆ ಅಕ್ಕಿ ಸಂಗ್ರಹಿಸಲು ನಾಫೆಡ್, ಕೇಂದ್ರೀಯ ಭಂಡಾರ್ ಮತ್ತು ಎನ್‌ಸಿಸಿಎಫ್‌ನಂತಹ ಕೇಂದ್ರೀಯ ಸಂಸ್ಥೆಗಳನ್ನು ಗುರುತಿಸಿದೆ, ಮತ್ತು ಸರ್ಕಾರವು ತನ್ನ ಬದ್ಧತೆಯನ್ನು ಪೂರೈಸುತ್ತದೆ ಮತ್ತು ಬಡವರಿಗೆ ಉಚಿತ ಅಕ್ಕಿಯನ್ನು ಶೀಘ್ರವಾಗಿ ವಿತರಿಸುತ್ತದೆ ಎಂದರು. ಕರ್ನಾಟಕದಲ್ಲಿ 1.19 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡುದಾರರು ಮತ್ತು 4.42 ಕೋಟಿ ಫಲಾನುಭವಿಗಳಿದ್ದಾರೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next