Advertisement

ಪ.ಬಂ: ರಾಜ್ಯದ 61 ಬಿಜೆಪಿ ನಾಯಕರಿಗೆ ವಿಐಪಿ ಭದ್ರತೆ ನೀಡಿ : ದೀದಿ ಸರ್ಕಾರಕ್ಕೆ ಕೇಂದ್ರ ಮನವಿ

03:20 PM Sep 08, 2021 | Team Udayavani |

ಪಶ್ಚಿಮ ಬಂಗಾಳ : ರಾಜ್ಯದ  61 ಬಿಜೆಪಿ ನಾಯಕರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ವಿಐಪಿ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದೆ.

Advertisement

ಆಗಸ್ಟ್ 31 ರ ದಿನಾಂಕದಲ್ಲಿ ಪಶ್ಚಿಮ ಬಂಗಾಳದ ಗೃಹ ಸಚಿವಾಲಯಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ಕೇಂದ್ರ ಪಡೆಗಳ ಭದ್ರತೆಯನ್ನು ಪಶ್ಚಿಮ ಬಂಗಾಳದ 61 ಪ್ರಮುಖ ಬಿಜೆಪಿ ನಾಯಕರಿಗೆ ನೀಡಲಾಗಿದೆ ಮತ್ತು ರಾಜ್ಯ ಸರ್ಕಾರ ಪ್ರೋಟೋಕಾಲ್ ಅನುಸರಿಸಬೇಕು ಮತ್ತು ವಿಐಪಿ ಭದ್ರತೆ ನೀಡುವಂತೆ ಕೇಳಿಕೊಂಡಿದೆ ಎಂದು ರಾಜ್ಯದ ಗೃಹ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ : ಜಾತ್ಯತೀತತೆ ಹೆಸರಿನಲ್ಲಿ ಮುಸ್ಲಿಮರನ್ನು ವಂಚಿಸಲಾಗಿದೆ: ಅಸಾದುದ್ದೀನ್ ವಾಗ್ದಾಳಿ

ಕೇಂದ್ರ ಸರ್ಕಾರ ದೀದಿ ಸರ್ಕಾರಕ್ಕೆ ಕಳುಹಿಸಿದ ಪತ್ರದಲ್ಲಿ ರಾಜ್ಯದ ಮಿಥುನ್ ಚಕ್ರವರ್ತಿ ಹಾಗೂ ಬಿಜೆಪಿ ಎಂ ಪಿ ಅರ್ಜುನ್ ಸಿಂಗ್ ಅವರನ್ನೊಳಗೊಂಡು 61ಟ ಮಂದಿಗೆ ರಕ್ಷಣೆ ಕೋರಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳಲ್ಲಿರುವ ಅರ್ಜುನ್ ಸಿಂಗ್ ನಿವಾಸದ ಮೇಲೆ ಬುಧವಾರ ಮುಂಜಾನೆ ಮೂರು ಕಚ್ಚಾ ಬಾಂಬ್‌ ಗಳನ್ನು ಎಸೆದ ಹಿನ್ನೆಲೆ ಕೇಂದ್ರ ಸರ್ಕಾರ ಈ ಮನವಿ ಮಾಡಿಕೊಂಡಿದ್ದು,  ಬಾಂಬ್ ದಾಳಿ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ವರದಿಯಾಗಿದೆ.

Advertisement

ಬಾಂಬ್ ದಾಳಿಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇನ್ನು, ಬಾಂಬ್ ಸ್ಫೋಟದ ಪರಿಣಾಮವಾಗಿ ಅರ್ಜುನ್ ಸಿಂಗ್ ಅವರ ಮನೆಯ ಗೇಟ್ ಗೆ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ವೈರಲ್ ವೀಡಿಯೋ | ಹಿಜಾಬ್ ಇಲ್ಲದ ಮಹಿಳೆ, ಕತ್ತರಿಸಿದ ಕಲ್ಲಂಗಡಿ ಹಣ್ಣಿನಂತೆ : ತಾಲಿಬಾನ್ ಉಗ್ರ

Advertisement

Udayavani is now on Telegram. Click here to join our channel and stay updated with the latest news.

Next