Advertisement

ಕೋವಿಡ್‌ ಕೇರ್‌ ಸೆಂಟರ್‌ಗೆ ಸಿಇಒ ಭೇಟಿ

10:15 AM Jul 20, 2020 | Suhan S |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿರುವ ಬೆನ್ನಲ್ಲೇ ಜಿಲ್ಲಾಡಳಿತ ಚುರುಕುಗೊಂಡಿದ್ದು, ಸೋಂಕಿತರ ಆರೈಕೆಗಾಗಿ ಜಿಲ್ಲಾಡಳಿತ ಜಿಲ್ಲೆಯ ಚಿಂತಾಮಣಿ ಹಾಗೂ ಗುಡಿಬಂಡೆ ತಾಲೂಕುಗಳಲ್ಲಿ ಸ್ಥಾಪಿಸಿರುವ ಕೋವಿಡ್‌-19 ಕೇರ್‌ ಸೆಂಟರ್‌ ಗಳಿಗೆ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ಭೇಟಿ ನೀಡಿ ಪರಿಶೀಲಿಸಿದರು.

Advertisement

ಜಿಲ್ಲೆಯಲ್ಲಿ ಕೋವೀಡ್‌-19 ವೈರಾಣು ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗುಡಿಬಂಡೆ ಹಾಗೂ ಚಿಂತಾ ಮಣಿ ತಾಲೂಕಿನ ಕಟೈನ್ಮೆಂಟ್‌ ಝೋನ್‌ ಹಾಗೂ ಕೊವೀಡ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಸೋಂಕಿತರಿಗೆ ನೀಡುತ್ತಿರುವ ವೈದ್ಯಕೀಯ ಚಿಕಿತ್ಸೆ ಕುರಿತು ಹಾಗೂ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲಿ ಸಿದರು. ಕೊವೀಡ್‌ ವೈರಾಣು ಸೋಂಕಿತ ರೊಂದಿಗೆ ಪರಾಮರ್ಶಿಸಿ ನೀಡುತ್ತಿರುವ ಚಿಕಿತ್ಸೆ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ದೃತಿಗೇಡಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿದ್ದರೂ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಪ್ರಥಮಹಾಗೂ ದ್ವಿತೀಯ ಸಂಪರ್ಕಿತರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಯಾರು ಆತಂಕಪಡುವ ಅಗತ್ಯವಿಲ್ಲ. ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next