Advertisement
ಸೋಮವಾರ ಬೆಳಗ್ಗೆ 11 ಗಂಟೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೇ 5ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಇದೇ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಒತ್ತಡವಾಗದಿರಲಿ ಎಂಬ ಕಾರಣದಿಂದ ಮೀಸಲಾತಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಸಲ್ಲಿಸುವ ನಿಯಮವನ್ನು ಸಡಿಲಗೊಳಿಸಲಾಗಿದೆ. ಅರ್ಜಿ ಸಲ್ಲಿಸುವ ವೇಳೆ ಮೀಸಲಾತಿಗೆ ಸಂಬಂಧಿಸಿದ ಜಾತಿ, ಗ್ರಾಮೀಣ ವಿದ್ಯಾರ್ಥಿ, ಕನ್ನಡ ಮಾಧ್ಯಮ, ಕಲ್ಯಾಣ ಕರ್ನಾಟಕ ಸೇರಿದಂತೆ ವಿವಿಧ ಮಾಹಿತಿಗಳನ್ನು (ಹೌದು ಅಥವಾ ಇಲ್ಲ) ಅಪ್ಲೋಡ್ ಮಾಡಿದರೆ ಸಾಕು. ಮೂಲ ದಾಖಲೆಗಳನ್ನು ದಾಖಲಾತಿ ಪರಿಶೀಲನೆ ವೇಳೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
Related Articles
ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬ ಮಾಹಿತಿ ನೀಡುವುದಕ್ಕಾಗಿ ವೀಡಿಯೋ ಮಾರ್ಗದರ್ಶನ ಮಾಡಲಾಗುತ್ತಿದೆ. ಕೆಇಎ ವೆಬ್ಸೈಟ್ನಲ್ಲಿ ಸೋಮವಾರ ಬೆಳಗ್ಗೆ ವೀಡಿಯೋ ಅಪ್ಲೋಡ್ ಮಾಡಲಾಗುತ್ತದೆ. ವೀಡಿಯೋ ನೋಡಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅದೇ ರೀತಿ ಶುಲ್ಕವನ್ನು ಪೋನ್ ಪೇ, ಗೂಗಲ್ ಪೇ ಮೂಲಕವೂ ಪಾವತಿ ಮಾಡಬಹುದುದಾಗಿದೆ ಎಂದು ನಿರ್ದೇಶಕಿ ತಿಳಿಸಿದ್ದಾರೆ.
Advertisement