Advertisement

ಶಾಂತಿಯುತವಾಗಿ ನಡೆದ ಸಿಇಟಿ

06:50 AM May 01, 2019 | Lakshmi GovindaRaj |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಮಂಗಳವಾರ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಬುಧವಾರ ಬೆಂಗಳೂರಿನಲ್ಲಿ ಗಡಿನಾಡು, ಹೊರನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಪರೀಕ್ಷೆ ನಡೆಯಲಿದೆ.

Advertisement

ಸಿಇಟಿಗೆ 194311 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಸೋಮವಾರ ನಡೆದ ಜೀವಶಾಸ್ತ್ರಕ್ಕೆ ಶೇ.79.90, ಗಣಿತಕ್ಕೆ ಶೇ.9192, ಮಂಗಳವಾರ ನಡೆದ ಭೌತಶಾಸ್ತ್ರಕ್ಕೆ 92.27 ಹಾಗೂ ರಸಾಯಶಾಸ್ತ್ರ ಪರೀಕ್ಷೆಗೆ ಶೇ.90.88ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.

ಎರಡು ದಿನವೂ ಯಾವುದೇ ಪರೀಕ್ಷಾ ಅಕ್ರಮಗಳಿಲ್ಲದೆ ಯಶಸ್ವಿಯಾಗಿ ಪರೀಕ್ಷೆ ಮುಗಿದಿದೆ. ಸಿಇಟಿ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರವನ್ನು ಪ್ರಾಧಿಕಾರದ ವೆಬ್‌ಸೈಟ್‌ //kea.kar.nic.in ನಲ್ಲಿ ಮೇ1ರ ಸಂಜೆ 5 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next