Advertisement

ಸಿಇಟಿ: ಕನ್ನಡ ಭಾಷಾ ಪರೀಕ್ಷೆ ಪೂರ್ಣ

12:37 AM Aug 31, 2021 | Team Udayavani |

ಮಂಗಳೂರು: ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ (ಸಿಇಟಿ)ಸೊಮವಾರ ದ.ಕ. ಜಿಲ್ಲೆಯ ಎರಡು ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದಿದೆ.

Advertisement

ಒಟ್ಟು 561 ನೋಂದಾಯಿತ ವಿದ್ಯಾರ್ಥಿಗಳ ಪೈಕಿ 446 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 115 ಮಂದಿ ಗೈರಾಗಿದ್ದಾರೆ. ಮಂಗಳೂರಿನ ರಾಮಕೃಷ್ಣ ಪಿಯು ಕಾಲೇಜು ಹಾಗೂ ನಂತೂರಿನ ಡಾ| ಎನ್‌ಎಸ್‌ಎಎಂ ಪಿಯು ಕಾಲೇಜಿನಲ್ಲಿ ಪರೀಕ್ಷೆ ನಡೆಯಿತು.

ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರ ಸಿಇಟಿ ಪರೀಕ್ಷೆ ಆರಂಭಗೊಂಡಿದ್ದು ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆ ನಡೆದಿತ್ತು. ಕಳೆದ ಸಾಲಿಗೆ ಹೋಲಿಸಿದರೆ ಈ ವರ್ಷ ಕೊರೊನಾ ನಡುವೆಯೂ ಹಾಜರಾತಿ ಉತ್ತಮವಾಗಿತ್ತು. ರವಿವಾರ ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next