Advertisement

CET: ಉಡುಪಿಯಲ್ಲಿ 8,037 ವಿದ್ಯಾರ್ಥಿಗಳಿಂದ ನೋಂದಣಿ

01:10 AM Apr 12, 2024 | Team Udayavani |

ಉಡುಪಿ: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾ ಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ನಿರ್ದೇಶಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ನಡೆದ ಸಿಇಟಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಎ. 18, 19ರಂದು ನಡೆಯುವ ಸಿಇಟಿಗೆ ಉಡುಪಿಯಲ್ಲಿ 6, ಕಾರ್ಕಳ ಹಾಗೂ ಕುಂದಾಪುರದಲ್ಲಿ ತಲಾ 4, ಬ್ರಹ್ಮಾವರದಲ್ಲಿ 3 ಸೇರಿದಂತೆ 17 ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ 8,037 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಯನ್ನು ಕಟ್ಟುನಿಟ್ಟಾಗಿ ನಡೆಸಬೇಕು. ವಿದ್ಯಾರ್ಥಿಗಳಿಗೆ ಗೊಂದಲವಾಗ ದಂತೆ ನಡೆದುಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳಿಗೆ ಸೂಚನೆ
ವಿದ್ಯಾರ್ಥಿಗಳು ಕೇಂದ್ರದೊಳಗೆ ವಾಚ್‌, ಮೊಬೈಲ್‌, ಎಲೆಕ್ಟ್ರಾನಿಕ್‌ ಉಪಕರಣ, ಆಭರಣ ಧರಿಸುವು ದನ್ನು ನಿಷೇಧಿಸಲಾಗಿದೆ. ಪ್ರವೇಶ ಪತ್ರದ ಜತೆಗೆ ಯಾವುದಾದರೂ ಒಂದು ಗುರುತಿನ ಚೀಟಿ ಕಡ್ಡಾಯ ವಾಗಿ ತರಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next