Advertisement

ಜೂನ್‌ 6ರಿಂದ ಸಿಇಟಿ ದಾಖಲಾತಿ ಪರಿಶೀಲನೆ

11:06 PM Jun 03, 2019 | Lakshmi GovindaRaj |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿಇಟಿ) ರ್‍ಯಾಂಕ್‌ ಪಡೆದ ಅಭ್ಯರ್ಥಿಗಳಿಗೆ ಜೂನ್‌ 6ರಿಂದ ದಾಖಲಾತಿ ಪರಿಶೀಲನೆ ನಡೆಯಲಿದೆ. ಮೊದಲ ದಿನ ಮೊದಲ ರ್‍ಯಾಂಕ್‌ನಿಂದ 2 ಸಾವಿರ ರ್‍ಯಾಂಕ್‌ವರೆಗೂ ದಾಖಲಾತಿ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮಗೆ ಸೂಚಿಸಿದ ಸಮಯದಲ್ಲಿ ಅಗತ್ಯವಿರುವ ಮೂಲ ದಾಖಲೆಗಳು ಹಾಗೂ ಒಂದು ದೃಢೀಕೃತ ಸೆಟ್‌ನೊಂದಿಗೆ ಪರಿಶೀಲನೆಗೆ ಹಾಜರಾಗಬೇಕು.

Advertisement

ಅಭ್ಯರ್ಥಿಗಳು ಬೆಂಗಳೂರಿನ ಕೇಂದ್ರ ಕಚೇರಿ ಸಹಿತವಾಗಿ ರಾಜ್ಯದ 28 ಸಹಾಯವಾಣಿ ಕೇಂದ್ರದಲ್ಲಿ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳ ಬಹುದು. ಆಯಾ ಜಿಲ್ಲೆಯ ಅಭ್ಯರ್ಥಿಗಳು ಜಿಲ್ಲೆಯಲ್ಲೇ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳಲಿ ಎಂಬ ಉದ್ದೇಶದಿಂದ ದಾವಣಗೆರೆ, ಬಳ್ಳಾರಿ, ರಾಯಚೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಕಾರವಾರ, ಮಂಗಳೂರು, ಶಿವಮೊಗ್ಗ, ಹಾಸನ, ಮೈಸೂರು, ತುಮಕೂರು, ಬೀದರ್‌, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಗದಗ, ಯಾದಗಿರಿ, ಬಾಗಲಕೋಟೆ, ಉಡುಪಿ, ಚಿಕ್ಕಬಳ್ಳಾಪುರ, ಮಡಿಕೇರಿ, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಹಾಯ ಕೇಂದ್ರ ಈ ವರ್ಷದಿಂದ ತೆರೆಯಲಾಗಿದೆ.

ಸಾಮಾನ್ಯ ವರ್ಗ, ಮೀಸಲಾತಿ ಪ್ರವರ್ಗಗಳು, ವಿಶೇಷ ವರ್ಗದ ಎಲ್ಲ ಅಭ್ಯರ್ಥಿಗಳು ತಮ್ಮ ಸ್ವಂತ ಜಿಲ್ಲೆಯಲ್ಲಿ ಅಥವಾ ಪಿಯುಸಿ ವ್ಯಾಸಂಗ ಮಾಡಿದ ಕೇಂದ್ರದಲ್ಲಿ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳಬಹುದು. ಪ್ರಾಧಿಕಾರದ ವೆಬ್‌ಸೈಟ್‌ //kea.kar.nic.in ನಿಂದ ಮಾಹಿತಿ ಪಡೆಯಬಹುದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next