Advertisement

ಕೊಣಾಜೆ : ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಸಿಎಫ್ ಐ ಪ್ರತಿಭಟನೆ : ಕಾರ್ಯಕರ್ತರ ಬಂಧನ

01:24 PM Aug 30, 2021 | Team Udayavani |

ಉಳ್ಳಾಲ : ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಸಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ವೇಳೆ ಸುಮಾರು ಐವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ ಘಟನೆ ಮಂಗಳೂರಿನ ಕೊಣಾಜೆ ವಿವಿ ಯಲ್ಲಿ ಸಂಭವಿಸಿದೆ.

Advertisement

ಕೊಣಾಜೆ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ, ಈ ವೇಳೆ ಪ್ರತಿಭಟನಾ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಯತ್ನಿಸಿದ್ದಾರೆ, ಆದರೆ ಪ್ರತಿಭಟನೆಯ ಕಾವು ಜೋರಾದ ಪರಿಣಾಮ ಪೊಲೀಸರು ಸುಮಾರು 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಪ್ರತಿಭಟನೆ ವೇಳೆ ವಿದ್ಯಾರ್ಥಿನಿಯರನ್ನೂ ಎಳೆದಾಡಿ ಪೊಲೀಸ್ ವ್ಯಾನ್ ಗೆ ತುಂಬಿಸಿದ ಪೊಲೀಸರು.

ಇದನ್ನೂ ಓದಿ :ನಾಲ್ಕನೇ ಟೆಸ್ಟ್ ಗೆ ಇಂಗ್ಲೆಂಡ್ ತಂಡದಿಂದ ಬಟ್ಲರ್ ಔಟ್- ಕ್ರಿಸ್ ವೋಕ್ಸ್ ಸೇರ್ಪಡೆ

ಘಟನೆ ಸಂಬಂಧಿಸಿ ವಿಶ್ವವಿದ್ಯಾಲಯಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಪೊಲೀಸರು ಸಂಪೂರ್ಣ ಬಂದ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next