Advertisement

ಕಾರ್ಮಿಕರಿಗೆ ಮಾಸ್ಕ್ ವಿತರಣೆ

07:30 PM May 10, 2020 | Naveen |

ಚಡಚಣ: ಕೊರೊನಾ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ತಡೆಗಾಗಿ ಪ್ರತಿಯೊಬ್ಬ ಕೂಲಿ ಕಾರ್ಮಿಕರು ಮಾಸ್ಕ್ ಹಾಕಿಕೊಂಡು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡಬೇಕು. ನಿರ್ಲಕ್ಷಿಸಿದರೆ ಅಪಾಯ ತಪ್ಪಿದ್ದಲ್ಲ ಎಂದು ನಾಗಠಾಣ ಶಾಸಕ ಡಾ| ದೇವಾನಂದ ಚವ್ಹಾಣ ಸಲಹೆ ನೀಡಿದರು.

Advertisement

ಸಮೀಪದ ಜಿಗಜೇವಣಿ ಗ್ರಾಮದಲ್ಲಿ ಉದ್ಯೋಗ ಖಾತ್ರಿಯಡಿ ನಡೆಯುತ್ತಿರುವ ಕೆರೆ ಕಾಮಗಾರಿ ಪರಿಶೀಲಿಸಿ ಮತ್ತು 200 ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಈವರೆಗೆ ಚಡಚಣ ತಾಲೂಕಿನಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ನಿಮ್ಮೂರಿಗೆ ಯಾರೇ ಹೊಸಬರು ಬಂದರೆ ತಕ್ಷಣ ಅಧಿಕಾರಿಗಳಿಗೆ ತಿಳಿಸಬೇಕು. ಅಕ್ಕಪಕ್ಕದ ಜನರಿಗೆ ಒಂದು ವೇಳೆ ಸೋಂಕಿನ ಲಕ್ಷಣ ಕಂಡುಬಂದರೆ ಆರೋಗ್ಯ ಕೇಂದ್ರಕ್ಕೇ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದರು.

ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡುತ್ತಿದ್ದು ಅವರಿಗೆ ಆರೋಗ್ಯದ ಕುರಿತು ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು ಎಂದರು. ಗ್ರಾಪಂ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ, ಎಪಿಎಂಸಿ ಉಪಾಧ್ಯಕ್ಷ ಬಾಬುಗೌಡ ಚವ್ಹಾಣ, ತಾಪಂ ಸದಸ್ಯ ರವಿದಾಸ ಜಾಧವ, ಪಿಡಿಒ ದಾನಯ್ಯ ಕರಜಗಿ, ತಾಪಂ ಸದಸ್ಯ ಅಮಸಿದ್ದ ಬಳಗಾನೂರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next