Advertisement

ಸಿದ್ದರಾಮಯ್ಯ-ಈಶ್ವರಪ್ಪ‌ ಮಧ್ಯೆ ಈಗ ‘ಚಡ್ಡಿ’ಕಲಹ

12:43 PM Jun 04, 2022 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಧ್ಯೆ ಈಗ “ಚಡ್ಡಿ” ಕಲಹ ಆರಂಭವಾಗಿದೆ.

Advertisement

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ‌ನಿವಾಸದ ಎದುರು ಎನ್ ಎಸ್ ಯುಐ ಕಾರ್ಯಕರ್ತರು ಚಡ್ಡಿ ಸುಟ್ಟು ಪ್ರತಿಭಟನೆ ನಡೆಸಿದ್ದನ್ನು ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯ ” ಚಡ್ಡಿ ಸುಟ್ಟಿದ್ದು ಸಾಂಕೇತಿಕ ಪ್ರತಿಭಟನೆ ” ಎಂದಿದ್ದರು.

ಈ ಹೇಳಿಕೆ ವಿರುದ್ಧ ಟ್ವೀಟ್ ಮಾಡುವ ಮೂಲ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ:ರಾಜ್ಯಸಭೆ: ನಾಲ್ಕನೇ ಸ್ಥಾನದ ಗೆಲುವಿಗೆ ಬೇಕಿದೆ ಆ ಒಂದು ಮತ; ಏನಿದು ಲೆಕ್ಕಾಚಾರ?

“ರಾವಣ ಬಾಲಕ್ಕೆ ಬೆಂಕಿ ಹಚ್ಚಿದ, ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ. ಚಡ್ಡಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್ ಎಸ್ಎಸ್ ತಂಟೆಗೆ ಬರಬೇಡಿ. ಹುಷಾರ್” ಎಂದು ಈಶ್ವರಪ್ಪ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next