Advertisement

Udupi ನಗರದಲ್ಲಿ ಸರ ಕಳ್ಳರ ಹಾವಳಿ; ಇಬ್ಬರು ಮಹಿಳೆಯರ ಕರಿಮಣಿ ಸರ ಎಳೆದು ಪರಾರಿ

01:24 PM Sep 18, 2023 | Team Udayavani |

ಉಡುಪಿ: ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿರುವ ಉಡುಪಿ ಜನತೆಗೆ ಬೆಳ್ಳಂಬೆಳಗ್ಗೆ ಸರ ಕಳ್ಳರಿಬ್ಬರು ಆತಂಕ ಹೆಚ್ಚಸಿದ್ದಾರೆ. ನಗರದಲ್ಲಿ ಬೆಳ್ಳಂಬೆಳಗ್ಗೆ ಬೈಕ್‌ ನಲ್ಲಿ ಬಂದ ದುಷ್ಕರ್ಮಿಗಳು ಇಬ್ಬರು ಮಹಿಳೆಯರ ಚಿನ್ನದ ಸರ ಕಸಿದುಕೊಂಡು ಪರಾರಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ.

Advertisement

ನಗರದ ರಾಜಾರಾಮ್ ಮೋಹನ್ ರಾಯ್ ರಸ್ತೆಯ ನಿವಾಸಿ ಎಪ್ಪತ್ತು ವರ್ಷದ ಗೀತಾ ಅವರು ಮುಂಜಾನೆ 5.30ಕ್ಕೆ ಶ್ರೀ ಕೃಷ್ಣ ಮಠಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವೃದ್ಧೆಯ ಮೂವರು ಪವನ್ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು.

ಇದೇ ದುಷ್ಕರ್ಮಿಗಳಿಬ್ಬರು ಕರಾವಳಿ ಬೈಪಾಸ್ ಬಳಿಯಿಂದ ತನ್ನ ತಾಯಿ ಮನೆಗೆ ಕದಿರು ಕಟ್ಟುವುದಕ್ಕೆ ತೆರಳುತ್ತಿದ್ದ ಕುತ್ಪಾಡಿ ನಿವಾಸಿ ಮಮತಾ (38 ವ) ಅವರ ಕುತ್ತಿಗೆಯಲ್ಲಿದ್ದ ಮೂರು ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಸಿದು ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:WC 23; ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ; ಆರ್ಚರ್ ಗಿಲ್ಲ ಜಾಗ; ಯುವ ಆಟಗಾರನಿಗೆ ಒಲಿದ ಅದೃಷ್ಟ

ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಗಳಿಬ್ಬರು ಸುಮಾರು 35 ವರ್ಷದ ಆಸುಪಾಸಿನವರು ಎಂದು ಮಹಿಳೆಯರು ತಿಳಿಸಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಕರಾವಳಿ ಬೈಪಾಸ್ ಬಳಿ ಪೊಲೀಸ್ ಇಲಾಖೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಆರೋಪಿಗಳ ಚಹರೆ ದಾಖಲಾಗಿದ್ದು, ಅದರ ಜಾಡುಹಿಡಿದು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.

Advertisement

ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next