Advertisement
ಜಿಲ್ಲೆಯ ಯಾದಗಿರಿ ಮತ್ತು ಸುರಪುರ ನಗರಸಭೆ ಹಾಗೂ ಗುರುಮಠಕಲ್ ಪುರಸಭೆಗೆ 2018ರಲ್ಲಿ ಚುನಾವಣೆ ನಡೆದು ಸೆಪ್ಟೆಂಬರ್ ಮೊದಲ ವಾರದಲ್ಲಿದಲ್ಲಿಯೇ ಫಲಿತಾಂಶ ಹೊರ ಬಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿತ್ತು.
Related Articles
Advertisement
ಗುರುಮಠಕಲ್ನಲ್ಲಿ ಮೈತ್ರಿ ಅಧಿಕಾರ ಹಿಡಿಯುತ್ತಾ?: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದು, ಕೆಪಿಸಿಸಿ ಸ್ಥಳೀಯ ಸಂಸ್ಥೆಗಳಲ್ಲಿಯೂ ಮೈತ್ರಿ ಸರ್ಕಾರ ರಚಿಸಲು ಮುಂದಾಗಿದ್ದು, ಗುರುಮಠಕಲ್ ಪುರಸಭೆಯ ಒಟ್ಟು 23 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಜೆಡಿಎಸ್ 8 ಸ್ಥಾನಗಳಲ್ಲಿ ಗೆದ್ದಿದ್ದು, ಬಿಜೆಪಿ 2 ಹಾಗೂ ಪಕ್ಷೇತರರು 1 ಸ್ಥಾನದಲ್ಲಿ ಗೆದ್ದಿದ್ದಾರೆ. ಗುರುಮಠಕಲ್ ವಿಧಾನಸಭೆಗೆ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಆಯ್ಕೆಯಾಗಿದ್ದು, ಅವರ ಪಕ್ಷದ ಅಭ್ಯರ್ಥಿ ಅಧ್ಯಕ್ಷವಾಗಲು ಅನುಕೂಲವಾಗುವಂತೆ ಅಧ್ಯಕ್ಷ ಸ್ಥಾನವನ್ನು ಬದಲಾಯಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಜೆಡಿಎಸ್ನಲ್ಲಿ ಅಧಿಕಾರಕ್ಕೇರುವ ಸಂಖ್ಯಾಬಲದ ಕೊರತಿಯಿರುವುದರಿಂದ ಕಾಂಗ್ರೆಸ್ನವರೊಂದಿಗೆ ಒಟ್ಟುಗೂಡಿ ಅಧ್ಯಕ್ಷ ಗದ್ದುಗೆ ಏರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
ಶಹಾಪುರನಲ್ಲಿ ಕಾಂಗ್ರೆಸ್ ಪಾರುಪತ್ಯ: ಇತ್ತೀಚೆಗಷ್ಟೇ ನಡೆದ ಶಹಾಪುರ ನಗರಸಭೆ 31 ಸ್ಥಾನಗಳಿಗೆ ಚುನಾವಣೆ ನಡೆದು 16 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇಲ್ಲಿ ಬಿಜೆಪಿ 12 ಸ್ಥಾನಗಳನ್ನು ಪಡೆದಿದ್ದು, ಎಸ್ಡಿಪಿಐ 2 ಹಾಗೂ ಪಕ್ಷೇತರ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ. ಒಟ್ಟಾರೆ ಜಿಲ್ಲೆಯ 4 ಸ್ಥಳೀಯ ಸಂಸ್ಥೆಗಳ ಬಲಾಬಲ ಗಮನಿಸಿದರೆ ಯಾದಗಿರಿ ಮತ್ತು ಸುರಪುರದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಏರಲಿದ್ದು, ಗುರುಮಠಕಲ್ನಲ್ಲಿ ಮೈತ್ರಿ ಪಕ್ಷಗಳು ಅಧಿಕಾರ ಗಿಟ್ಟಿಸಿಕೊಳ್ಳಲಿವೆ. ಇನ್ನು ಶಹಾಪುರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ.
•ಅನೀಲ ಬಸೂದೆ