Advertisement

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

08:50 PM Apr 13, 2021 | Team Udayavani |

ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಕವಿಯತ್ರಿ ಚೈತ್ರಾ ಕೊಟ್ಟೂರ್ ಅವರ ದಾಂಪತ್ಯ ಕಲಹ ಇದೀಗ ಮತ್ತೊಮ್ಮೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

Advertisement

ಇಂದು (ಏಪ್ರಿಲ್ .14) ಪೊಲೀಸ್ ಠಾಣೆಯಲ್ಲಿ ಚೈತ್ರಾ ಅವರು ತಮ್ಮ ಪತಿ ನಾಗಾರ್ಜುನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೂರಿನಲ್ಲಿ ಏನಿದೆ ?

ಮದುವೆಯಾದರೂ ತನ್ನೊಂದಿಗೆ ಸಂಸಾರ ನಡೆಸುತ್ತಿಲ್ಲ ಎಂದು ಚೈತ್ರಾ ಆರೋಪಿಸಿದ್ದಾರೆ. ಮದುವೆಯಾಗಿ ವಂಚನೆ ಮಾಡಿರುವ ನಾಗಾರ್ಜುನ್ ತನ್ನ ಜೊತೆ ಸಂಸಾರ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ.‌ ಈ ಬಗ್ಗೆ ಅವರನ್ನ ಕರೆಸಿ ಬುದ್ಧಿವಾದ ಹೇಳಿ ಎಂದು ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಬಸವನಗುಡಿ ಮಹಿಳಾ ಪೊಲೀಸರು ಗಂಭೀರ ಸ್ವರೂಪವಲ್ಲದ ಅಪರಾಧ (ಎನ್​ಸಿಆರ್) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿಗಷ್ಟೆ ಚೈತ್ರಾ ಹಾಗೂ ನಾಗಾರ್ಜುನ್ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಮದುವೆಯಾದ ದಿನವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಮದುವೆ ನನಗೆ ಇಷ್ಟವಿಲ್ಲ, ಬಲವಂತವಾಗಿ ನನ್ನ ಕೈಯಿಂದ ತಾಳಿ ಕಟ್ಟಿಸಲಾಗಿದೆ ಎಂದು ನಾಗಾರ್ಜುನ್ ದೂರು ನೀಡಿದ್ದರು. ನಾಗಾರ್ಜುನ್ ಅವರ ಮನೆಯವರು ಸಹ ಚೈತ್ರಾ ಅವರ ಮನೆಗೆ ಬಂದು ಜಗಳವಾಡಿದ್ದರು.

Advertisement

ಇದರ ನಡುವೆಯೇ ಚೈತ್ರಾ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಸೇರಿದ ಘಟನೆ ಕೂಡ ವರದಿಯಾಗಿತ್ತು. ಇದೀಗ ಅವರು ಪತಿಯ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next