Advertisement

ವಲಸಿಗರಿಗೆ ಕ್ವಾರಂಟೈನ್‌: ಡಾ|ಪ್ರೇಮಸುಧಾ

03:37 PM May 01, 2020 | Naveen |

ಚಳ್ಳಕೆರೆ: ಕೋವಿಡ್ ವೈರಾಣು ನಿಯಂತ್ರಣದ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆ, ರಾಜ್ಯಗಳಿಂದ ಬಂದ ವಲಸಿಗರ ಆರೋಗ್ಯ ತಪಾಸಣೆ ನಡೆಸಿ ಅವರನ್ನು ಹಾಸ್ಟೆಲ್‌ಗ‌ಳಲ್ಲಿ ಕ್ವಾರಂಟೈನ್‌ ಮಾಡಲಾಗುವುದು. ಆಂಧ್ರಪ್ರದೇಶದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ 15 ಜನ ಹಾಗೂ ಬೇರೆ ಜಿಲ್ಲೆಯಿಂದ ಆಗಮಿಸಿರುವ 3 ಜನ ಸೇರಿದಂತೆ ಒಟ್ಟು 18 ಜನರನ್ನು ನಗರದ ಬಿಸಿಎಂ ಹಾಸ್ಟಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ ತಿಳಿಸಿದ್ದಾರೆ.

Advertisement

ಮೈಸೂರು, ಬೆಂಗಳೂರು ಮತ್ತು ದೊಡ್ಡಬಳ್ಳಾಪುರದಿಂದ ಆಗಮಿಸಿದ ಮೂವರು ವ್ಯಕ್ತಿಗಳು ಕ್ರಮವಾಗಿ ದೊಡ್ಡೇರಿ ಮತ್ತು ಇನ್ನಿತರೆ ಗ್ರಾಮಗಳಲ್ಲಿದ್ದಾರೆ. ಅವರನ್ನು ಪತ್ತೆ ಹಚ್ಚಿ ಪ್ರಾಥಮಿಕ ಹಂತದ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್‌ ಮಾಡಲಾಗಿದೆ. ಅದೇ ರೀತಿ ತಾಲೂಕಿನ ಗಡಿ ಭಾಗದಲ್ಲಿರುವ ಕಡೇಉಡೆ, ಪಿ.ಮಹದೇವಪುರ ಮುಂತಾದ ಗ್ರಾಮಗಳಲ್ಲಿ ಆಂಧ್ರಪ್ರದೇಶಕ್ಕೆ ಸಂಪರ್ಕ ಹೊಂದಿದ್ದ 15 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಿರುವುದಾಗಿ ಹೇಳಿದರು. ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌ ತಾಪಂ ಇಒ ಡಾ| ಶ್ರೀಧರ್‌ ಐ. ಬಾರಕೇರ್‌, ಪರಶುರಾಂಪುರ ಠಾಣೆ ಪಿಎಸ್‌ಐ ಮಹೇಶ್‌ ಹೊಸಪೇಟೆ, ಎನ್‌. ಪ್ರೇಮಕುಮಾರ್‌, ತಿಪ್ಪೇಸ್ವಾಮಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next