Advertisement

ನಿರಾಶ್ರಿತರ ಆರೋಗ್ಯ ತಪಾಸಣೆ

01:28 PM Apr 19, 2020 | Team Udayavani |

ಚಳ್ಳಕೆರೆ: ಕಳೆದ ಮೂರು ದಿನಗಳಿಂದ ನಗರದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸವಾಗಿರುವ ನಿರಾಶ್ರಿತರ ಆರೋಗ್ಯ ತಪಾಸಣೆಯನ್ನು ಶನಿವಾರ ನಡೆಸಲಾಯಿತು.

Advertisement

ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ, ಮೊಳಕಾಲ್ಮೂರು ಸಮಾಜ ಕಲ್ಯಾಣಾಧಿಕಾರಿ ಗುರುಮೂರ್ತಿ, ಚಳ್ಳಕೆರೆ ತಾಲೂಕು ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಮಾಲತಿ, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ| ಬಸವರಾಜು, ಡಾ| ವೆಂಕಟೇಶ್‌, ಡಾ| ಶಮಾ ಪರ್ವಿನ್‌, ಆರೋಗ್ಯ ಇಲಾಖೆಯ ಎನ್‌. ಪ್ರೇಮಕುಮಾರ್‌, ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ಇದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನೀಡಿದ ಕೊಬ್ಬರಿ ಎಣ್ಣೆ, ಸೋಪು ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು.

ಡಾ| ಎನ್‌. ಪ್ರೇಮಸುಧಾ ಮಾತನಾಡಿ, ಒಟ್ಟು 7 ಜನ ಗರ್ಭಿಣಿಯರಿದ್ದು, ಎಲ್ಲರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸಂಪರ್ಕಿಸುವಂತೆ ಮನವಿ ಮಾಡಿದರು. ಎರಡು ಬಾರಿ ಎಲ್ಲರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಕೆಲವರಿಗೆ ಮಾತ್ರ ತಲೆನೋವು, ಇನ್ನಿತರೆ ಸಣ್ಣಪುಟ್ಟ ಸಮಸ್ಯೆಗಳಿವೆ. ಅವರಿಗೆ ಮಾತ್ರೆಗಳನ್ನು ವಿತರಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next