Advertisement

Challenge: ವಯನಾಡ್ ಬದಲು ಹೈದರಾಬಾದ್ ನಿಂದ ಸ್ಪರ್ಧಿಸಿ… ರಾಹುಲ್ ಗೆ ಸವಾಲು ಹಾಕಿದ ಓವೈಸಿ

09:20 AM Sep 25, 2023 | Team Udayavani |

ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲು ಎಸೆದಿದ್ದು, ಮಾಜಿ ಭದ್ರಕೋಟೆಯಾಗಿರುವ ಹೈದರಾಬಾದ್‌ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರೆ ನೀಡಿದ್ದಾರೆ.

Advertisement

“ಅಬ್ಕಿ ಬಾರ್ ವಯನಾಡ್ ನಹಿ, ಅಬ್ಕಿ ಬಾರ್ ಹೈದರಾಬಾದ್ (ಹೈದರಾಬಾದ್‌ನಿಂದ ಸ್ಪರ್ಧಿಸಿ ಮತ್ತು ವಯನಾಡ್ ಅಲ್ಲ)” ಎಂದು ಓವೈಸಿ ಅವರು ರಾಹುಲ್ ಗಾಂಧಿಯವರ ಕೇರಳದ ಲೋಕಸಭಾ ಕ್ಷೇತ್ರವನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಭಾನುವಾರ ಬಹಿರಂಗ ಸವಾಲು ಹಾಕಿದ ಓವೈಸಿ “ನೀವು (ರಾಹುಲ್ ಗಾಂಧಿ) ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುವ ಬದಲು ಚುನಾವಣಾ ಮೈದಾನಕ್ಕೆ ಬಂದು ನನ್ನ ವಿರುದ್ಧ ಸ್ಪರ್ಧಿಸಿ, ನೀವು ಸಿದ್ಧರಿದ್ದೀರಿ ಎಂದಾದರೆ ನಾನು ಸಿದ್ಧನಿದ್ದೇನೆ ಎಂದು ಅವರು ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next