Advertisement

ಸಚಿವ ಆಶೋಕ್ ಪ್ರಚಾರ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಲಿ: ಚಲುವರಾಯಸ್ವಾಮಿ 

02:27 PM Oct 05, 2021 | Team Udayavani |

ಬೆಂಗಳೂರು: ಸಚಿವ ಆಶೋಕ್ ಅವರು ಪ್ರಚಾರ ಮಾಡುವುದನ್ನು ಬಿಟ್ಟು ಪ್ರಾಮಾಣಿಕವಾಗಿ ಇಲಾಖೆಯಲ್ಲಿ ಕೆಲಸ ಮಾಡಲಿ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಆಗ್ರಹಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕೋವಿಡ್ 19 ಸೋಕಿನಿಂದ ಸತ್ತವರ ಕುಟುಂಬಕ್ಕೆ ಪರಿಹಾರ ಕೊಡಲಿ. ಅಂಕಿ ಅಂಶಗಳನ್ನು ಮುಚ್ಚಿ ಹಾಕುವುದು ಬೇಡ. ಸಾವನ್ನಪ್ಪಿದ ಕುಟುಂಬಕ್ಕೆ ಮೊದಲು ಪರಿಹಾರ ಕೊಡಿ ಎಂದರು.

ಉಪಚುನಾವಣೆಯ ಕುರಿತಾಗಿ ಮಾತನಾಡಿದ ಚಲುವರಾಯಸ್ವಾಮಿ, ಹಾನಗಲ್ ಮತ್ತು ಸಿಂದಗಿಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕುಮಾರಸ್ವಾಮಿ ಹಾಕಿದ್ದಾರೆ. ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕೂಡಿದರೆ ಗೊತ್ತಾಗಲ್ವಾ. ಹಾನಗಲ್ ಮತ್ತು ಸಿಂದಗಿಯಲ್ಲಿ ಬಿಜೆಪಿಗೆ ಲಾಭ ತರಲು ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಅವರಿಗೆ ಭಯ ಇದೆ. ಹೀಗಾಗಿ ಈಗದಿಂದಲೇ ಬಿಜೆಪಿ ಜತೆ ಸೇರಿ ತಂತ್ರಗಾರಿಕೆ ಮಾಡುತ್ತಿದ್ದಾರೆ. ಜನ ಎಲ್ಲವನ್ನೂ ನೋಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರು ಬುದ್ದಿ ಕಲಿಸುತ್ತಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next