Advertisement

Chamarajanagar; ರಸ್ತೆ ಅಪಘಾತದಲ್ಲಿ ಹೆಬ್ರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

11:04 PM Nov 27, 2023 | Team Udayavani |

ಚಾಮರಾಜನಗರ: ನಿಧನರಾದ ತನ್ನ ತಾತನ ಅಂತಿಮ ದರ್ಶನ ಪಡೆಯಲು ತೆರಳುತ್ತಿದ್ದ ಮೊಮ್ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಪಣ್ಯದಹುಂಡಿ ಕ್ರಾಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.

Advertisement

ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ನಿತೀಶ್ ಪೂಜಾರಿ ಮೃತ ಯುವಕ. ಉಡುಪಿಯ ಹೆಬ್ರಿ ಮೂಲದವರಾದ ಇವರು, ಚಾಮರಾಜನಗರ ಸರ್ಕಾರಿ ವೈದ್ಯಕೀಯ ಕಾಲೇಜಿ (ಸಿಮ್ಸ್) ನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದರು. ಅವರ ತಾತ ಮೃತರಾದ ಸುದ್ದಿ ತಿಳಿದು ಭಾನುವಾರ ತಡರಾತ್ರಿ ಬಸ್ ಗಳು ಯಾವುದೂ ಇಲ್ಲದಿರುವುದರಿಂದ ಬೈಕ್ ನಲ್ಲಿ ಮೈಸೂರು ಕಡೆಗೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಪಣ್ಯದ ಹುಂಡಿ ಬಳಿ ರೈಲ್ವೆ ಕ್ರಾಸಿಂಗ್‌ನ ಹಂಪ್ಸ್‌ ಇದ್ದು, ಬೈಕ್ ಸ್ಕಿಡ್ ಆಗಿ ಬಿದ್ದು ಮೃತರಾಗಿರುವರೇ ಅಥವಾ ಬೇರೆ ವಾಹನ ಡಿಕ್ಕಿಯಾಗಿ ಮೃತಪಟ್ಟರೇ ಎಂಬುದು ಇನ್ನೂ ಖಚಿತವಾಗಿಲ್ಲ. ತಲೆಗೆ ತೀವ್ರ ಪೆಟ್ಟು ಬಿದ್ದು, ಮೃತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next