Advertisement

Chamarajanagar: ಆನೆ ಕಳೆಬರ ಪತ್ತೆ- 7-8 ತಿಂಗಳ ಹಿಂದೆ ಸಾವು ಶಂಕೆ

01:05 PM Aug 30, 2024 | Team Udayavani |

ಯಳಂದೂರು (ಚಾಮರಾಜನಗರ): ಬಿ.ಆರ್.ಟಿ. ಹುಲಿರಾಯ ಸಂರಕ್ಷಿತ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯದ ವಿಭಾಗದ ಆಳದ ಕೆರೆ ಬಳಿ ಗಂಡಾನೆ ಸ್ವಾಭಾವಿಕವಾಗಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Advertisement

ಆಗಸ್ಟ್ 27 ರಂದು ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಆನೆಯ ಕಳೆಬರ ಪತ್ತೆಯಾಗಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ 7-8 ತಿಂಗಳ ಹಿಂದೆಯೇ ಗಂಡಾನೆ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಆನೆಯ 2 ದಂತಗಳು ಸುರಕ್ಷಿತವಾಗಿದ್ದು, ಅರಣ್ಯ ಇಲಾಖೆ ಇದನ್ನು ವಶಕ್ಕೆ ಪಡೆದುಕೊಂಡಿದೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ. ಹಿರೇಲಾಲ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯದ ನಿರ್ದೇಶಕ ಶ್ರೀಪತಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ .ಸುರೇಶ್ ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಹಾಗೂ ಡಾ. ವಾಸಿಮ್ ಮಿರ್ಜಾ ರವರು ನೇತೃತ್ವದ ತಂಡ ಆನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು ಸುರಕ್ಷಿತವಾಗಿದ್ದ 2 ಆನೆ ದಂತಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮ ವಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next