Advertisement

Chamarajanagar: ಪಿಡಬ್ಲ್ಯೂಡಿ ಸಹಾಯಕ ಇಂಜಿನಿಯರ್ ಅಪಘಾತದಲ್ಲಿ ನಿಧನ

10:52 PM Aug 23, 2023 | Team Udayavani |

ಚಾಮರಾಜನಗರ: ನಗರದ ಲೋಕೋಪಯೋಗಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಇಂಜಿನಿಯರ್ ಮಧುಸೂದನ್ (40 ) ರಸ್ತೆ ಅಪಘಾತದಲ್ಲಿ ಬುಧವಾರ ಸಂಜೆ ನಿಧನರಾಗಿದ್ದಾರೆ.

Advertisement

ಚಾಮರಾಜನಗರದಿಂದ ಮೈಸೂರಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ, ರಸ್ತೆಯಲ್ಲಿ ನಿಂತಿದ್ದ ಲಾರಿಯನ್ನು ಗಮನಿಸಿ ಬಲಕ್ಕೆ ಬೈಕ್ ತಿರುಗಿಸಿದಾಗ, ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡು ತಕ್ಷಣ ಅವರನ್ನು ಮೈಸೂರು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತ ಮಧುಸೂದನ್ ಅವರಿಗೆ ತಂದೆ ತಾಯಿ, ಪತ್ನಿ, ಓರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ತಾಲೂಕಿನ ಸಂತೆಮರಹಳ್ಳಿ ಸಮೀಪದ ಹೆಗ್ಗವಾಡಿ ಗ್ರಾಮದಲ್ಲಿ ಗುರುವಾರ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next