Advertisement

ಚಾ.ನಗರ ಡಿಸಿ ಡಾ.ಎಂ.ಆರ್.ರವಿ ವರ್ಗಾವಣೆ :ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಿ.ಸಿ. ಸತೀಶ ನೇಮಕ

06:27 PM Feb 13, 2021 | Team Udayavani |

ಚಾಮರಾಜನಗರ: ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರನ್ನು ಬೆಂಗಳೂರಿನ ಸಕಾಲ ಮಿಷನ್‌ನ ಹೆಚ್ಚುವರಿ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಿ.ಸಿ. ಸತೀಶ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

Advertisement

ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ಡಾ. ಬಿ.ಸಿ. ಸತೀಶ ಅವರು ಪ್ರಸ್ತುತ ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಆಯಕ್ತರಾಗಿದ್ದರು.

ಡಾ. ಎಂ.ಆರ್. ರವಿ ಅವರು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ 2020ರ ಜನವರಿ 30ರಂದು ಅಧಿಕಾರ ವಹಿಸಿಕೊಂಡಿದ್ದರು. ಜಿಲ್ಲೆಯಲ್ಲಿ 1 ವರ್ಷ 14 ದಿನಗಳ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ:ಮಂಡ್ಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಅಶ್ವಥಿ ನೇಮಕ

Advertisement

Udayavani is now on Telegram. Click here to join our channel and stay updated with the latest news.

Next